ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೆಹಲಿ ಕನ್ನಡ ಸಮ್ಮೇಳನಕ್ಕೆ ನಲ್ಲೂರ್ ಅಧ್ಯಕ್ಷ
ನವದೆಹಲಿ, ಜ. 19 : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರ್ ಪ್ರಸಾದ್ ಅವರು ಏಪ್ರಿಲ್ 11ರಿಂದ ದೆಹಲಿಯಲ್ಲಿ ನಡೆಯುತ್ತಿರುವ ಕನ್ನಡ ಭಾಷಿಕರ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಿಂದ ಪ್ರಕಟವಾಗುತ್ತಿರುವ ಕನ್ನಡ ಮಾಸಿಕ ಪತ್ರಿಕೆ 'ದೆಹಲಿ ಕನ್ನಡಿಗ' ಈ ಎರಡು ದಿನಗಳ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸಮ್ಮೇಳನವನ್ನು ತುಮಕೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಓ ಅನಂತರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ದೆಹಲಿ ಕನ್ನಡಿಗ ಪತ್ರಿಕೆಯ ಪ್ರಕಟವಣೆ ತಿಳಿಸಿದೆ.
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ, ಕವಿಗೋಷ್ಠಿ, ಮಹಿಳಾ ಉತ್ಸವ ಮತ್ತು ಅಂತಾರಾಜ್ಯ ಸಾಮರಸ್ಯತೆ ಕುರಿತಂತೆ ವಿಸ್ತೃತ ಚರ್ಚೆಗಳಾಗಲಿವೆ. ರಾಷ್ಟ್ರದ ಎಲ್ಲೆಡೆಯಿಂದ ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, January 19, 2009, 15:13 [IST]