ಜಾರ್ಖಂಡ್ ಮೇಲೆ ರಾಷ್ಟ್ರಪತಿ ಆಡಳಿತ
ನವದೆಹಲಿ, ಜ. 19 : ಮಾಜಿ ಮುಖ್ಯಮಂತ್ರಿ ಶಿಬು ಸೋರೇನ್ ಸೋಲಿನಿಂದ ರಾಜಕೀಯ ಅನಿಶ್ಚಿತತೆಯಲ್ಲಿರುವ ಜಾರ್ಖಂಡ್ ರಾಜ್ಯದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದ್ದು, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಂಭವವಿದೆ. ರಾಜ್ಯ ಉಂಟಾಗಿರುವ ಅತಂತ್ರ ಸ್ಥಿತಿಯಿಂದ ರಾಜ್ಯಪಾಲ ಸಯ್ಯದ್ ಸಿಬ್ತೆ ರಜಿ ಅವರು ಜಾರ್ಖಂಡ್ ರಾಜ್ಯದ ಮೇಲೆ ರಾಷ್ಟ್ರಪತಿ ಆಡಳಿತ ಹೇರಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ತಮಾರ್ ವಿಧಾನಸಭೆ ಉಪಚುನಾವಣೆಯಲ್ಲಿ ಸೋಲುಂಡ ನಂತರ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಅವರು ಅಧಿಕ ರಕ್ತದ ಒತ್ತಡದಿಂದ ಬಳಲುತ್ತಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶಿಬು ಸೊರೇನ್ ಅವರು ಚಂಪಾಯಿ ಸೋರೇನ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೇಳಿದ್ದರು. ಆದರೆ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಪಕ್ಷೇತರರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ಸ್ಥಿತಿ ಅತಂತ್ರಗೊಂಡಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ರಾಷ್ಟ್ರಪತಿ ಆಡಳಿತ ಹೇರಲು ಲಾಲೂ ವಿರೋಧಿಸುತ್ತಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಜಾರ್ಖಂಡ್ : ಥಮಾರ್ ನಲ್ಲಿ ಮಣ್ಣು ಮುಕ್ಕಿದ ಶಿಬು












Click it and Unblock the Notifications