ಪುಟ್ಟಣ್ಣ ಉಪಸಭಾಪತಿ ಸ್ಥಾನಕ್ಕೆ ಸ್ಪರ್ಧೆ
ಬೆಂಗಳೂರು, ಜ. 20 : ಜೆಡಿಎಸ್ ಪಾಲಿಗೆ ಬರಲಿರುವ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಜಾತ್ಯಾತೀತ ಜನತಾದಳದ ಶಾಸಕ ಪುಟ್ಟಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಸೋಮವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂದು ಪುಟ್ಟಣ್ಣ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಮಧ್ಯೆ ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಉಪಸಭಾಪತಿ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು. ಈ ಸ್ಥಾನಕ್ಕ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳು ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆ ನಿರ್ಧಾರವನ್ನು ಕೈಗೊಳ್ಳುವಂತೆ ತಮ್ಮ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಗೆ ವಹಿಸಿಕೊಡಲಾಗಿತ್ತು. ಕೊನೆಯಲ್ಲಿ ಸಮಿತಿ ಶಾಸಕ ಪುಟ್ಟಣ್ಣ ಅವರನ್ನು ಉಪಸಭಾಪತಿ ಮಾಡಲು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.
ಹಿರಿಯ ನಾಯಕರಾದ ಎಂ ಸಿ ನಾಣಯ್ಯ, ಎಚ್ ಡಿ ರೇವಣ್ಣ, ಎನ್ ಚೆಲುವರಾಯಸ್ವಾಮಿ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಪುಟ್ಟಣ್ಣ ಹೆಸರನ್ನು ಶಿಫಾರಸ್ಸು ಮಾಡಿದೆ. ಆದರೆ, ಇನ್ನೊಂದು ಮೂಲಗಳ ಪ್ರಕಾರ, ದೇವೇಗೌಡರು ಅಬ್ಧುಲ್ ಅಜೀಂ ಅವರನ್ನು ಉಪಸಭಾಪತಿ ಮಾಡಲು ಒಲವು ತೋರಿಸಿದ್ದರು ಎನ್ನಲಾಗಿದೆ. ಸಭಾಪತಿ ಆಯ್ಕೆ ಸಂದರ್ಭದಲ್ಲಿ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿತ್ತು. ಇದರಿಂದ ವೀರಣ್ಣ ಮತ್ತಿಕಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡಿದ್ದು, ಪುಟ್ಟಣ್ಣ ಉಪಸಭಾಪತಿಯಾಗಲಿದ್ದಾರೆ. ಬುಧವಾರ ಚುನಾವಣೆ ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)
ಅನಿತಾ ಎಚ್ಡಿಕೆ, ಕಲ್ಪನಾ ಪ್ರಮಾಣ ವಚನ ಸ್ವೀಕಾರ












Click it and Unblock the Notifications