ಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ

ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ ಕೂಡ ವಿಪ್ ಉಲ್ಲಂಘಿಸಿ ಮತದಾನದಿಂದ ದೂರ ಉಳಿದಿದ್ದರು. ಆಗಲೇ ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳಿದ್ದ ಈ ಮೂವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿತ್ತು. ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ಹೊತ್ತಿರುವ ಪೃಥ್ವಿರಾಜ ಚೌಹಾಣ್ ಸಮ್ಮುಖದಲ್ಲಿ ಈ ಮೂವರು ಕಾಂಗ್ರೆಸ್ ಸೇರಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪೃಥ್ವಿರಾಜ್ ಚೌಹಾಣ್, ಈ ಮೂವರು ನಾಯಕರು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬೇಷರತ್ ಆಗಿ ಬಂದಿದ್ದಾರೆ. ಲೋಕಸಭೆ ಟಿಕೆಟ್ ಸೇರಿದಂತೆ ಯಾರಿಗೂ ಯಾವ ಅಶ್ವಾಸನೆಯನ್ನೂ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ











Click it and Unblock the Notifications