ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ

By Staff
|
Google Oneindia Kannada News

Expelled BJP leaders join Congress
ನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.

ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ ಕೂಡ ವಿಪ್ ಉಲ್ಲಂಘಿಸಿ ಮತದಾನದಿಂದ ದೂರ ಉಳಿದಿದ್ದರು. ಆಗಲೇ ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳಿದ್ದ ಈ ಮೂವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿತ್ತು. ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ಹೊತ್ತಿರುವ ಪೃಥ್ವಿರಾಜ ಚೌಹಾಣ್ ಸಮ್ಮುಖದಲ್ಲಿ ಈ ಮೂವರು ಕಾಂಗ್ರೆಸ್ ಸೇರಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೃಥ್ವಿರಾಜ್ ಚೌಹಾಣ್, ಈ ಮೂವರು ನಾಯಕರು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬೇಷರತ್ ಆಗಿ ಬಂದಿದ್ದಾರೆ. ಲೋಕಸಭೆ ಟಿಕೆಟ್ ಸೇರಿದಂತೆ ಯಾರಿಗೂ ಯಾವ ಅಶ್ವಾಸನೆಯನ್ನೂ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಬಿಜೆಪಿ ಸದಸ್ಯತ್ವಕ್ಕೆ ಕಲ್ಯಾಣ ಸಿಂಗ್ ರಾಜೀನಾಮೆ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X