ಬೀದರ್ ನಲ್ಲಿ ವಿಮಾನಕ್ಕೆ ಬೆಂಕಿ, ಒಂದು ಸಾವು
ಬೀದರ್, ಜ. 21 : ಇಲ್ಲಿನ ಭಾರತೀಯ ವಾಯುಯಾನ ತರಬೇತಿ ಕೇಂದ್ರದ ಹೊರವಲಯದಲ್ಲಿ ಬುಧವಾರ ಬೆಳಗ್ಗೆ ಸಾಹಸ ಪ್ರದರ್ಶನ ನಡೆಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ವಿಮಾನ ಚಾಲಕ ಸಾವನ್ನಪ್ಪಿದ್ದಾರೆ. ಸಾಹಸ ಕ್ರೀಡೆಯಲ್ಲಿ ತನ್ಮಯವಾಗಿದ್ದ ಎರಡು ವಿಮಾನಗಳಲ್ಲಿ ಒಂದು ವಿಮಾನದ ರೆಕ್ಕೆಗೆ ಆಕಸ್ಮಾತ್ ಬೆಂಕಿ ತಗುಲಿದ ಪರಿಣಾಮ ಅಪಘಾತ ಸಂಭವಿಸಿದೆ. ಹಿರಿಯ ಪೈಲೆಟ್ ಆಗಿದ್ದ ಹರ್ಯಾಣ ಮೂಲದ ಆರ್ ಎಸ್ ಧನಿವಾಲ್ ದುರ್ಮರಣಕ್ಕೆ ಈಡಾಗಿದ್ದಾರೆ.
ಸೂರ್ಯಕಿರಣ ವಿಮಾನ ಹಾಗೂ ಇನ್ನೊಂದು ತರಬೇತಿ ವಿಮಾನ ಇಂದು ಬೆಳಗ್ಗೆ ಸಾಹಸ ಪ್ರದರ್ಶನ ಆರಂಭಿಸಿದವು. ಕೆಳಹಂತದಲ್ಲಿ ಸಂಚರಿಸುತ್ತಿದ್ದ ವಿಮಾನಗಳ ರೆಕ್ಕೆಗಳು ಒಂದಕ್ಕೊಂದು ಬಡಿದುಕೊಂಡವು. ಆಗ ಒಂದು ವಿಮಾನ ತಕ್ಷಣವೇ ನೆಲಕ್ಕಪ್ಪಳಿಸಿದ್ದರಿಂದ ಚಾಲಕ ಮೃತಪಟ್ಟರು. ನೆಲಕ್ಕುರುಳಿದ ವಿಮಾನ ಭಾಗಶಃ ಬೆಂಕಿಗೆ ಆಹುತಿಯಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವೈಮಾನಿಕ ಕ್ಷೇತ್ರದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಮಠಾಣದಿಂದ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications