ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ
ಬೆಳಗಾವಿ, ಜ. 21 : ನಗರದಲ್ಲಿ ನಡೆಯುತ್ತಿರುವ ಅಧಿವೇಶನದ ಆರನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಸರ್ಕಾರದ ಮೇಲೆ ಮತ್ತೆ ಮುಗಿಬಿದ್ದರು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಉಭಯ ಸದನದಲ್ಲಿ ಪ್ರತಿಪಕ್ಷಗಳಿಂದ ಒಕ್ಕೊರಲಿನ ಒತ್ತಾಯ ಕೇಳಿಬಂದಿತು. ಹಾಗೂ ಈ ಹಗರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಲೇ ಸ್ಪಷ್ಟ ಉತ್ತರ ನೀಡಬೇಕು ಎಂದು ಪಟ್ಟುಹಿಡಿದರು. ಇದರಿಂದ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ, ವಾಗ್ವಾದ ನಡೆದಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು.
ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರತಿಯಾಗಿ ಉತ್ತರ ನೀಡಿದರು. ಲೋಕಾಯುಕ್ತರು ನೀಡಿರುವ ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಶೀಘ್ರವಾಗಿ ಸಮಗ್ರ ತನಿಖೆ ನಡೆಸುವಂತೆ ವಿರೋಧಿ ಪಕ್ಷಗಳು ಒತ್ತಾಯಿಸುತ್ತಿರುವುದು ಸರಿ. ಇದಕ್ಕೆ ಸಂಬಂಧಿಸಿದಂತೆ ಕೂಡಲೇ ಜಂಟಿ ಸದನ ಸಮಿತಿಯೊಂದನ್ನು ರಚಿಸುತ್ತೇವೆ ಎಂದು ಉತ್ತರಿಸಿದರು. ಆದರೆ, ಪ್ರತಿಪಕ್ಷಗಳು ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ಪಕ್ಷ ಇನ್ನೊಂದು ಸಾರಿ ತನ್ನ ಒತ್ತಾಯವನ್ನು ಪುನರ್ ಪುರಿಶೀಲನೆ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಪುತ್ರನಿಗೆ ಸಂಬಂಧಿಸಿದ ನೂರಾರು ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಶಿಫಾರಸ್ಸು ಮಾಡಲಾಗಿತ್ತು. ನಂತರ ಬಂದ ಕುಮಾರಸ್ವಾಮಿ ಸರ್ಕಾರದಲ್ಲಿ ಅನೇಕ ಅಕ್ರಮ ಗಣಿಗಾರಿಕೆ ಪರವಾನಿಗೆಯನ್ನು ಪುನರ್ ನವೀಕರಣ ಮಾಡಲಾಗಿದೆ. ರಾಜ್ಯಪಾಲರ ಆಡಳಿತದಲ್ಲಿಯೂ ಅನೇಕ ಲೋಪದೋಷಗಳಾಗಿವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ವಲಯದಿಂದ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಯಿತು.
ಪ್ರತಿಪಕ್ಷಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಮಾತ್ರ ಮುಖ್ಯಮಂತ್ರಿ ಹೇಳುತ್ತಿರುವುದು ಏಕೆ, ಲೋಕಾಯುಕ್ತರು ನೀಡಿರುವ 109 ಮಂದಿಯ ಹೆರಸನ್ನು ಹೇಳಿ ಎಂದು ಯಡಿಯೂರಪ್ಪ ಅವರನ್ನು ಕಾಂಗ್ರೆಸ್ಸಿಗರು ಆಗ್ರಹಿಸಿದರು. ಜೆಡಿಎಸ್ ಕೂಡ ಇದೇ ರಾಗ ಹಾಡಿತು. ಇದರಿಂದ ಸದನದಲ್ಲಿ ಗದ್ದಲ, ಗೌಜು ಉಂಟಾಯಿತು.
(ದಟ್ಸ್ ಕನ್ನಡ ವಾರ್ತೆ)
ಗಣಿ ಗದ್ದಲ ಸದನದಲ್ಲಿ ಕೋಲಾಹಲ
ರೆಡ್ಡಿಯನ್ನು ಸಂಪುಟದಿಂದ ಕೈಬಿಡಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications