ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ

ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ ಪ್ರಶಸ್ತಿ ಪಡೆದ ಭೀಮರಾವ ಗಸ್ತಿ ಅವರ ಗೌರವಾರ್ಥ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿ ಮಾತನಾಡುತ್ತಿದ್ದ ಅವರು ಯಮನಾಪುರ ಗ್ರಾಮದಲ್ಲಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಗಸ್ತಿ ಅವರನ್ನು ಕನ್ನಡಪ್ರಭ ಪತ್ರಿಕೆಯು ಗುರುತಿಸಿ ಪ್ರಶಸ್ತಿ ನೀಡಿದ್ದು, ಪ್ರಶಂಸಾರ್ಹವಾಗಿದೆ ಎಂದರು.
ಯಮನಾಪುರ ಗ್ರಾಮವು ಹೆಚ್ಚು ಮರಾಠಿ ಜನಸಂಖ್ಯೆಯನ್ನು ಹೊಂದಿರುವಂತಹ ಗ್ರಾಮವಾಗಿದ್ದು, ಪತ್ರಿಕೆಗೆ ಆಗಲಿ, ಅಥವಾ ಸರಕಾರಕ್ಕಾಗಲಿ ಅಭಿವೃದ್ಧಿಯೇ ಮುಖ್ಯ ಅಭಿವೃದ್ಧಿಯಲ್ಲಿ ಭಾಷೆ ಅಡ್ಡಿ ಬರುವುದಿಲ್ಲವೆಂಬುದಕ್ಕೆ ಇಂದು ನಡೆದ ಸಮಾರಂಭವೇ ಸಾಕ್ಷಿಯಾಗಿದೆಯೆಂದು ಹೇಳಿದರು. ಕನ್ನಡಪ್ರಭ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಇತ್ತೀಚಿಗೆ ಗಸ್ತಿ ಅವರಿಗೆ ಪ್ರದಾನ ಮಾಡಿ, ಯಮನಾಪುರ ಅಭಿವೃದ್ಧಿಗೆ ಒಂದು ಕೋಟಿ ರೂ.ಗಳನ್ನು ಘೋಷಿಸಲಾಗಿತ್ತು. ತನ್ನ ಜನಾಂಗದ ನೋವು-ಸಂಕಷ್ಟಗಳ ವಿರುದ್ಧ ಹೋರಾಡುತ್ತಲೇ ಬಂದಿರುವ ಡಾ ಗಸ್ತಿ ಅವರ ಸಲಹೆ-ಸೂಚನೆಯಂತೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ನಾನು ಘೋಷಿಸಿದ ಅಭಿವೃದ್ಧಿ ಯೋಜನೆಗೆ ನಾನೇ ಚಾಲನೆ ನೀಡುತ್ತಿರುವುದು ಅತ್ಯಂತ ಸಂತೋಷ ತಂದಿದೆ. ಅದರಂತೆ ಈಗ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿದ್ದು, ಉಳಿದ ಅನುದಾನವನ್ನು ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು. ಸರಕಾರವು ಕೂಡಾ ಗಸ್ತಿ ಅವರಂತಹ ಸಮಾಜ ಸೇವಕರನ್ನು ಬೆನ್ನು ತಟ್ಟಿ, ಅವರ ಅಕಾಂಕ್ಷೆಗಳನ್ನು ಅನುಷ್ಠಾನಕ್ಕೆ ತರಲಿದೆ. ಅದರಂತೆ ಸರಕಾರವು ಎಲ್ಲ ಜನಾಂಗದ ಅಭಿವೃದ್ಧಿಗೂ ಬದ್ಧವಾಗಿದ್ದು, ಈಗ ಮಂಜೂರಾದ ಅನುದಾನ ಸಮರ್ಪಕವಾಗಿ ಬಳಸಿ ಕಾಲಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ
ಸಂಪುಟದಿಂದ ರೆಡ್ಡಿ ಕೈಬಿಡಲು ದೇಶಪಾಂಡೆ ಆಗ್ರಹ
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications