ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ

ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ ಪ್ರಶಸ್ತಿ ಪಡೆದ ಭೀಮರಾವ ಗಸ್ತಿ ಅವರ ಗೌರವಾರ್ಥ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿ ಮಾತನಾಡುತ್ತಿದ್ದ ಅವರು ಯಮನಾಪುರ ಗ್ರಾಮದಲ್ಲಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಗಸ್ತಿ ಅವರನ್ನು ಕನ್ನಡಪ್ರಭ ಪತ್ರಿಕೆಯು ಗುರುತಿಸಿ ಪ್ರಶಸ್ತಿ ನೀಡಿದ್ದು, ಪ್ರಶಂಸಾರ್ಹವಾಗಿದೆ ಎಂದರು.
ಯಮನಾಪುರ ಗ್ರಾಮವು ಹೆಚ್ಚು ಮರಾಠಿ ಜನಸಂಖ್ಯೆಯನ್ನು ಹೊಂದಿರುವಂತಹ ಗ್ರಾಮವಾಗಿದ್ದು, ಪತ್ರಿಕೆಗೆ ಆಗಲಿ, ಅಥವಾ ಸರಕಾರಕ್ಕಾಗಲಿ ಅಭಿವೃದ್ಧಿಯೇ ಮುಖ್ಯ ಅಭಿವೃದ್ಧಿಯಲ್ಲಿ ಭಾಷೆ ಅಡ್ಡಿ ಬರುವುದಿಲ್ಲವೆಂಬುದಕ್ಕೆ ಇಂದು ನಡೆದ ಸಮಾರಂಭವೇ ಸಾಕ್ಷಿಯಾಗಿದೆಯೆಂದು ಹೇಳಿದರು. ಕನ್ನಡಪ್ರಭ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಇತ್ತೀಚಿಗೆ ಗಸ್ತಿ ಅವರಿಗೆ ಪ್ರದಾನ ಮಾಡಿ, ಯಮನಾಪುರ ಅಭಿವೃದ್ಧಿಗೆ ಒಂದು ಕೋಟಿ ರೂ.ಗಳನ್ನು ಘೋಷಿಸಲಾಗಿತ್ತು. ತನ್ನ ಜನಾಂಗದ ನೋವು-ಸಂಕಷ್ಟಗಳ ವಿರುದ್ಧ ಹೋರಾಡುತ್ತಲೇ ಬಂದಿರುವ ಡಾ ಗಸ್ತಿ ಅವರ ಸಲಹೆ-ಸೂಚನೆಯಂತೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ನಾನು ಘೋಷಿಸಿದ ಅಭಿವೃದ್ಧಿ ಯೋಜನೆಗೆ ನಾನೇ ಚಾಲನೆ ನೀಡುತ್ತಿರುವುದು ಅತ್ಯಂತ ಸಂತೋಷ ತಂದಿದೆ. ಅದರಂತೆ ಈಗ ಸಮುದಾಯ ಭವನಕ್ಕೆ ಅಡಿಗಲ್ಲು ನೆರವೇರಿಸಿದ್ದು, ಉಳಿದ ಅನುದಾನವನ್ನು ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುವುದು. ಸರಕಾರವು ಕೂಡಾ ಗಸ್ತಿ ಅವರಂತಹ ಸಮಾಜ ಸೇವಕರನ್ನು ಬೆನ್ನು ತಟ್ಟಿ, ಅವರ ಅಕಾಂಕ್ಷೆಗಳನ್ನು ಅನುಷ್ಠಾನಕ್ಕೆ ತರಲಿದೆ. ಅದರಂತೆ ಸರಕಾರವು ಎಲ್ಲ ಜನಾಂಗದ ಅಭಿವೃದ್ಧಿಗೂ ಬದ್ಧವಾಗಿದ್ದು, ಈಗ ಮಂಜೂರಾದ ಅನುದಾನ ಸಮರ್ಪಕವಾಗಿ ಬಳಸಿ ಕಾಲಮಿತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
ಅಕ್ರಮ ಗಣಿಗಾರಿಕೆ ಸ್ಪಷ್ಟನೆಗೆ ಪ್ರತಿಪಕ್ಷಗಳ ಆಗ್ರಹ
ಸಂಪುಟದಿಂದ ರೆಡ್ಡಿ ಕೈಬಿಡಲು ದೇಶಪಾಂಡೆ ಆಗ್ರಹ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications