ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ
ಬೆಳಗಾವಿ, ಜ.22: "ಸುವರ್ಣ ಸೌಧ ನಿರ್ಮಾಣ ಶಂಕು ಸ್ಥಾಪನೆ ಮಾಡುತ್ತಿರುವುದು ಬಿಜೆಪಿ ಕೃಪಾಪೋಷಿತ ಕಾರ್ಯಕ್ರಮ, ಬೆಳಗಾವಿ ಜನತೆಯ ಮುಂದೆ ತಮ್ಮ ಪಕ್ಷದ ಹೆಚ್ಚುಗಾರಿಕೆಯನ್ನು ತೋರಿಸುವ ಹುನ್ನಾರ, ನಾವು ಈ ಕಾರ್ಯಕ್ರಮದಲ್ಲಿ ಖಂಡಿತಾ ಪಾಲ್ಗೊಳ್ಳುವುದಿಲ್ಲ" ಎಂದು ಕಿಡಿಕಾರಿದರು ಜೆಡಿಎಸ್ ನ ನಾಯಕ ವೈಎಸ್ ವಿ ದತ್ತ. ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಕೂಡ ನೆನ್ನೆಯ ಈ ಬಗ್ಗೆ ತಗಾದೆ ತೆಗೆದಿದ್ದರು. ಆದರೆ, ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಆಡಳಿತ ಪಕ್ಷದ ಕಾರ್ಯಕರ್ತರು ಬಿರುಸಿನಿಂದ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.
ಸುವರ್ಣ ಸೌಧ ನಿರ್ಮಾಣ ಈ ಭಾಗದ ಜನರ ಬಹು ದಿನದ ಕನಸು. ಅದಕ್ಕೆ ನಾಂದಿ ಹಾಡಿದ್ದು ಕುಮಾರಸ್ವಾಮಿ ಅವರು, ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡುವುದು. ಅಧಿವೇಶನ ನಡೆಸುವುದು, ಸುವರ್ಣ ಸೌಧ ನಿರ್ಮಾಣ ಎಲ್ಲವೂ ಅವರು ಅಧಿಕಾರದಲ್ಲಿದ್ದಾಗ ಹಾಕಿಕೊಂಡ ಯೋಜನೆಯಾಗಿದೆ. ಇಷ್ಟಾದರೂ ಯಡಿಯೂರಪ್ಪ ಅವರ ಸರ್ಕಾರ ಕನಿಷ್ಠ ಸೌಜನ್ಯವಿಲ್ಲದಂತೆ ವರ್ತಿಸುತ್ತಿದೆ. ಸುವರ್ಣ ಸೌಧ ಶಂಕುಸ್ಥಾಪನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕುಮಾರಸ್ವಾಮಿ ಅವರ ಹೆಸರನ್ನು ಹಾಕದೆ ಬಹು ದೊಡ್ಡ ಪ್ರಮಾದ ಮಾಡಿದೆ. ಇದು ಅವರ ಖಾಸಗಿ ಕಾರ್ಯಕ್ರಮವಲ್ಲ ಎಂದು ದತ್ತ ಲೇವಡಿ ಮಾಡಿದರು.
ಕಾಂಗ್ರೆಸ್ ಗುಡುಗು: ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಕೂಡ ನಾಪತ್ತೆ ಆಗಿರುವುದನ್ನು ಕಂಡು ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಂಡ ಕಾರಿದ್ದಾರೆ. ಪ್ರತಿಪಕ್ಷಗಳನ್ನು ಗಣನೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಸಭೆ ಸಮಾರಂಭ ನಡೆಸಲು ಹೊರಟಿರುವುದು ಪ್ರಮಾದ ಇದಕ್ಕೆ ಬೆಳಗಾವಿಯ ಪ್ರಜ್ಞಾವಂತ ಜನರಿಂದಲೇ ತಕ್ಕ ಉತ್ತರ ದೊರೆಯಲಿದೆ ಎಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications