ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯ
ಬೆಳಗಾವಿ. ಜ. 22 : ರಾಮನಗರದಲ್ಲಿ ರಾಜೀವಗಾಂಧಿ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಾ. ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಸದನಕ್ಕೆ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪ್ರಶ್ನೆಯನ್ನು ಅವರ ಪರವಾಗಿ ಶಾಸಕ ಬಾಲಕೃಷ್ಣ ಅವರು ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ್ದಕ್ಕೆ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿಶ್ವವಿದ್ಯಾಲಯವನ್ನು ಶೀಘ್ರವಾಗಿ ಸ್ಥಾಪಿಸಲಾಗುವುದು ಎಂದು ಉತ್ತರಿಸಿದರು.
ಮುಖ್ಯಮಂತ್ರಿ ಡಾ. ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2009 ಮತ್ತು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಿದ್ದುಪಡಿ) ವಿಧೇಯಕ 2009 ಮಸೂದೆಗಳನ್ನು ಮಂಡಿಸಿದರು. ಕಂದಾಯ ಸಚಿವರಾದ ಶ್ರೀ ಕರುಣಾಕರ ರೆಡ್ಡಿ ಅವರು ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2008 ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಕರ್ನಾಟಕ ದೇವದಾಸಿಯರ ( ಸಮರ್ಪಣಾ ನಿಷೇಧ - ತಿದ್ದುಪಡಿ) ವಿಧೇಯಕ 2009 ಮಸೂದೆಗಳನ್ನು ವಿಧಾನ ಸಭೆಯಲ್ಲಿ ಮಂಡಿಸಲಾಯಿತು.
(ದಟ್ಸ್ ಕನ್ನಡ ವಾರ್ತೆ)
ಘಟಪ್ರಭಾ ನದಿ ಸೇತುವೆ ನಿರ್ಮಾಣಕ್ಕೆ ಚಾಲನೆ
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!











Click it and Unblock the Notifications