ಇಬ್ಬರು ಮಕ್ಕಳು ಸೇರಿ ಮೂವರು ಸಜೀವ ದಹನ
ಮಂಗಳೂರು, ಜ. 22 : ಆಕಸ್ಮಿಕವಾಗಿ ಅಟೋವೊಂದಕ್ಕೆ ಬೆಂಕಿ ತಗುಲಿದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಜೀವ ದಹನವಾಗಿರುವ ದಾರುಣ ಘಟನೆ ನಗರದ ಕಣ್ಣೂರು ಬಳಿ ಬೊರುಗುಡ್ಡ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಪೌಜಿಯಾ (21), ಸಿಬಾ (6) ಹಾಗೂ ನೂರಿಸಾ (3) ಮೃತಪಟ್ಟಿರುವ ದುರ್ದೈವಿಗಳು.
ಬೊರುಗುಡ್ಡ ಪ್ರದೇಶದಲ್ಲಿ ನಿಂತಿದ್ದ ಆಟೋವೊಂದಕ್ಕೆ ಬೆಂಕಿ ತಗುಲಿರುವುದು ಸಂಶಯಕ್ಕೆ ಎಡೆಮಾಡಿದೆ. ಅಟೋ ಪಕ್ಕದಲ್ಲಿ ಸೀಮೆ ಎಣ್ಣೆ ಕ್ಯಾನ್ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ಸೇರಿ ಮೂವರೂ ಅಟೋದಲ್ಲಿ ಕುಳಿತಿದ್ದರು. ಇದ್ದಕ್ಕಿದ್ದಂತೆ ಅಟೋಗೆ ಬೆಂಕಿ ಹತ್ತಿದೆ. ಸ್ಥಳದಲ್ಲಿ ಇಬ್ಬರು ಮೃತಪಟ್ಟರೆ, ಪೌಜಿಯಾ ಎಂಬುವವರು ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications