ಬೆಳಗಾವಿ, ಸುವರ್ಣ ಸೌಧಕ್ಕೆ ಯಡಿಯೂರಪ್ಪ ಅಡಿಗಲ್ಲು
ಬೆಳಗಾವಿ, ಜ. 22 : ತೀವ್ರ ವಿವಾದದ ನಡುವೆಯೇ ಇಂದು ಬೆಳಗ್ಗೆ ನಗರದ ಹೊರವಲಯದ ಹಲಗಾ ಪ್ರದೇಶದಲ್ಲಿ ನೂತನ ಸುವರ್ಣಸೌಧ ಕಟ್ಟಡಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಅಧಿಕೃತವಾಗಿ ಆಹ್ವಾನ ನೀಡಿಲ್ಲ ಎನ್ನುವ ಕಾರಣಕ್ಕೆ ಪ್ರತಿಪಕ್ಷಗಳ ಮುಖಂಡರು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಗೈರು ಹಾಜರಾಗಿರುವುದು ಎದ್ದು ಕಂಡಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 230 ಕೋಟಿ ರುಪಾಯಿ ವೆಚ್ಚದಲ್ಲಿ ಸುವರ್ಣ ಸೌಧವನ್ನು ನಿರ್ಮಿಸಲಾಗುತ್ತಿದ್ದು, ಮುಂದಿನ ವರ್ಷದ ಅಧಿವೇಶನವನ್ನು ನೂತನ ಕಟ್ಟಡದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಅಗತ್ಯ ಸಹಾಯ ಸೌಕರ್ಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಪಕ್ಷಗಳ ಗೈರು ಹಾಜರಿ ಬಗ್ಗೆ ಗಮನ ಸೆಳೆದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಡಿಯೂರಪ್ಪ, ಬಿಜೆಪಿ ಸರ್ಕಾರ ಅಧಿಕಾರ ಬಂದಾಗನಿಂದಲೂ ಪ್ರತಿಪಕ್ಷಗಳು ಸಹಕಾರ ನೀಡುತ್ತಿಲ್ಲ. ಪ್ರತಿಯೊಂದರಲ್ಲಿ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ ಎಂದರು. ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ರಾಜಕೀಯ ಬೆರೆಸಿ ಕಾಲೆಳೆಯುವ ಕಾರ್ಯದಲ್ಲಿ ವಿರೋಧ ಪಕ್ಷಗಳು ಮಗ್ನವಾಗಿವೆ ಆಕ್ರೋಶ ವ್ಯಕ್ತಪಡಿಸಿದರು.
ಸುವರ್ಣ ಸೌಧ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭಕ್ಕೆ ಪ್ರತಿಪಕ್ಷಗಳಿಗೆ ಅಧಿಕೃತ ಆಹ್ವಾನ ನೀಡಿದರೂ ಗೈರು ಹಾಜರು ಆಗಿರುವುದು ರಾಜ್ಯದ ಐದೂವರೆ ಕೋಟಿ ಜನರಿಗೆ ಮೋಸ ಮಾಡಿದಂತೆ ಎಂದು ಆರೋಪಿಸಿದರು. ಈ ರಾಜ್ಯ ಜನತೆ ಬಿಜೆಪಿಗೆ ಜನಾದೇಶ ನೀಡಿದೆ. ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಾಗಿನಿಂದಲೂ ಕೆಲ ನಾಯಕರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಪರೋಕ್ಷವಾಗಿ ಜೆಡಿಎಸ್ ಮುಖಂಡರ ಮೇಲೆ ಹರಿದಾಯ್ದರು. ವಿನಾಕಾರಣ ಸರ್ಕಾರದ ವಿರುದ್ಧ ಹರಿಹಾಯುವುದನ್ನು ಪ್ರತಿಪಕ್ಷಗಳು ಕೈ ಬಿಡಬೇಕು ಎಂದು ಕಿವಿ ಮಾತು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಬೆಳಗಾವಿಲಿ ಸುವರ್ಣ ಸೌಧ ತಲೆಯೆತ್ತಲಿದೆ!!!
ಸುವರ್ಣ ಸೌಧ ಅಡಿಗಲ್ಲಿಗೆ ಪ್ರತಿಪಕ್ಷಗಳ ಕಿಡಿ
ಆರನೇ ದಿನದ ಕಲಾಪ ಗಣಿ ಲಂಚಕ್ಕೆ ಹೋಮ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications