ಸಾವಳಗಿ ಮಠಕ್ಕೆ ಯಡಿಯೂರಪ್ಪ ಭೇಟಿ
ಬೆಳಗಾವಿ, ಜ, 22 : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿರುವ ಗೋಕಾಕ ತಾಲೂಕಿನ ಸಾವಳಗಿಯ ಶಿವಲಿಂಗೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಶಿವಲಿಂಗೇಶ್ವರ ಮಠವು ಜಾಗೃತಿ ಕ್ಷೇತ್ರವಾಗಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸ್ಥಳವಾಗಿರುವ ಈ ಮಠಕ್ಕೆ ತಾವು ಗುರುಗಳ ದರ್ಶನ ಹಾಗೂ ಆಶಿರ್ವಾದ ಪಡೆಯಲು ಇಲ್ಲಿಗೆ ಬಂದಿದ್ದು, ಧರ್ಮಪ್ರಜ್ಞೆ, ಸಮಾಜ ಪ್ರಜ್ಞೆ ಮೂಡಿಸುವ ಕಾರ್ಯದಲ್ಲಿ ತೊಡಗಿರುವ ಈ ಐತಿಹಾಸಿಕ ಸ್ಥಳಕ್ಕೆ ತಾವು ಭೇಟಿ ನೀಡಿ ಪುನೀತನಾಗಿದ್ದೇನೆಂದು ಹೇಳಿದರು.
ರಾಜ್ಯದ ಜನತೆ ನೆಮ್ಮದಿಯಿಂದ ಬದುಕಬೇಕು. ರೈತರು, ಕೂಲಿಕಾರ್ಮಿಕರು, ಮಹಿಳೆಯರು, ಅಲ್ಪಸಂಖ್ಯಾತರ ಏಳಿಗೆ ಹಾಗೂ ಸಂರಕ್ಷಣೆಗೆ ತಮ್ಮ ಸರಕಾರ ಬದ್ಧವಾಗಿದ್ದು, ರಾಜ್ಯದ ಐದುವರೆ ಕೋಟಿ ಜನತೆಯ ಸೇವಕನಾಗಿ ತಾವು ಸೇವೆ ಸಲ್ಲಿಸುತ್ತಿದ್ದು, ಮುಂಬರುವ ಐದು ವರ್ಷಗಳಲ್ಲಿ ಈ ನಾಡನ್ನು ಸಂಪೂರ್ಣ ಅಭಿವೃದ್ಧಿ ಪಥದತ್ತ ಒಯ್ಯುವ ಅಕಾಂಕ್ಷೆ ತಾವು ಹೊಂದಿದ್ದು, ಜನತೆಯ ಭರವಸೆ ಹುಸಿಗೊಳಿಸುವುದಿಲ್ಲವೆಂದು ಭರವಸೆ ನೀಡಿದರು.
ಶಿವಲಿಂಗೇಶ್ವರ ಸಿದ್ಧಸಂಸ್ಥಾನ ಮಠದ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಲೋಕಸಭಾ ಸದಸ್ಯ ಸುರೇಶ ಅಂಗಡಿ ಉಪಸ್ಥಿತರಿದ್ದರು.
(ದಟ್ಸ್
ಕನ್ನಡ
ವಾರ್ತೆ)
ಘಟಪ್ರಭಾ
ನದಿ
ಸೇತುವೆ
ನಿರ್ಮಾಣಕ್ಕೆ
ಚಾಲನೆ
ಸುವರ್ಣ
ಸೌಧ
ಅಡಿಗಲ್ಲಿಗೆ
ಪ್ರತಿಪಕ್ಷಗಳ
ಕಿಡಿ