ಸ್ಲಂಡಾಗ್ ಮಿಲೇನಿಯರ್ ಚಿತ್ರದಲ್ಲಿ ಹಿಂದುತ್ವಕ್ಕೆ ಧಕ್ಕೆ
ಪಣಜಿ, ಜ. 23 : ಸ್ಲಂ ಡಾಗ್ ಚಿತ್ರದ ಜೈ ಹಿಂದ್ ಎನ್ನುವ ಹಾಡಿಗೆ ಖ್ಯಾತ ಸಂಗೀತ ಮಾಂತ್ರಿಕ ಎ ಆರ್ ರೆಹಮಾನ್ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ಪಡೆದುಕೊಂಡಿದ್ದು ಹಳೆಯ ವಿಷಯ. ಈ ಚಿತ್ರ ಆಸ್ಕರ್ ಪ್ರಶಸ್ತಿಗೂ ಕೂಡ ನಾಮಕರಣಗೊಂಡಿರುವುದು ಭಾರತೀಯ ಸಿನಿ ಅಭಿಮಾನಿಗಳಿಗೆ ಭಾರಿ ಸಂತೋಷದ ಸಂಗತಿಯೇ ಆಗಿದೆ. ಆದರೆ, ಸ್ಲಂಡಾಗ್ ಚಿತ್ರದಲ್ಲಿ ಹಿಂದೂ ಸಮುದಾಯದ ಆರಾಧ್ಯ ದೈವ ಶ್ರೀರಾಮಚಂದ್ರನನ್ನು ಅವಹೇಳನ ಮಾಡಲಾಗಿದೆ. ಈ ಕಾರಣದಿಂದ ಸ್ಲಂಡಾಗ್ ಮಿಲೇನಿಯರ್ ಚಿತ್ರದ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಗೋವಾದ ಹಿಂದೂ ಜಾಗರಣ ಸಮಿತಿ ಬೆದರಿಕೆ ಹಾಕಿದೆ.
ಸ್ಲಂಡಾಗ್ ಚಿತ್ರದಲ್ಲಿ ಹಿಂದೂಗಳು ಆರಾಧ್ಯದೈವನೆಂದು ಪೂಜಿಸುವ ಶ್ರೀರಾಮಚಂದ್ರನನ್ನು ಅವಹೇಳನ ಮಾಡಲಾಗಿದೆ. ಭಾರತದಲ್ಲಿದ್ದು ಹಿಂದೂಗಳ ಭಾವನೆಗಳನ್ನು ಧಕ್ಕೆ ಬರುವಂತಹ ಚಿತ್ರ ನಿರ್ಮಿಸಿರುವುದು ಖಂಡನೀಯ. ಚಿತ್ರ ಪ್ರದರ್ಶನಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗೋವಾ ಹಿಂದೂಜಾಗರಣ ಸಮಿತಿ ವಕ್ತಾರ ಜಯೇಶ್ ಥಾಲಿ ತಿಳಿಸಿದ್ದಾರೆ.
ಇಂದು ( ಜ.23) ದೇಶಾದ್ಯಂತ ಸ್ಲಂಡಾಗ್ ಮಿಲೇನಿಯರ್ ಚಿತ್ರ ಬಿಡುಗಡೆ ಕಂಡಿದೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗುವ ಚಿತ್ರ ಪ್ರದರ್ಶನಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಗೋವಾ ಹಿಂದು ಜಾಗರಣ ಸಮಿತಿ ಸದಸ್ಯರು ಮುಂಬೈನಲ್ಲಿರುವ ಕೇಂದ್ರೀಯ ಚಲನಚಿತ್ರ ಆಕಾಡೆಮಿಗೆ ಭೇಟಿ ನೀಡಿ ಮನವಿ ಮಾಡಿಕೊಂಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮಕರಣ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications