ಬೀದರ ಉತ್ಸವಕ್ಕೆ ಸಕಲ ಸಿದ್ಧತೆ
ಬೀದರ. ಜ. 23 : ಬೀದರ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಐತಿಹಾಸಿಕ ಬೀದರ ಕೊಟೆ ಸಂಪೂರ್ಣ ಸಜ್ಜಾಗುತ್ತಿದ್ದು, ಮೂರು ದಿನಗಳ ಸಾಂಸ್ಕೃತಿಕ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಬೀದರ ಉತ್ಸವಕ್ಕೆ ಪೂರ್ವಭಾವಿಯಾಗಿ ಬೀದರ ಕೋಟೆಯನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಹಲವಾರು ತಿಂಗಳುಗಳಿಂದ ಕೈಗೊಳ್ಳಲಾಗುತ್ತಿದ್ದು, ಕೋಟೆಯ ಒಳಗೆ ಜನರ ಸುಗಮ ಸಂಚಾರಕ್ಕೆ ಪೂರಕವಾಗಿ ಹೊಸ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ.
ಕೋಟೆಯ ಒಳಗೆ ಇರುವ ಬೊಮ್ಮಗೊಂಡೇಶ್ವರ ಕೆರೆಗೆ ಹೊಸ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿದೆ. ಕೆರೆಯ ಮೇಲ್ದಂಡೆಯಲ್ಲಿ ಕೆರೆಯ ವೀಕ್ಷಣೆಗಾಗಿ ಸ್ಥಳವನ್ನು ಸಜ್ಜುಗೊಳಿಸಲಾಗಿದ್ದು, ಕೆರೆಯ ಬಳಿಗೆ ತೆರಳಲು ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಬೊಮ್ಮಗೊಂಡೇಶ್ವರ ಕೆರೆಗೆ ಹೆಚ್ಚಿನ ಜನರನ್ನು ಆಕರ್ಷಿಸುವ ಉದ್ದೇಶದಿಂದ ಉತ್ಸವದ ಸಂದರ್ಭದಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಬೊಮ್ಮಗೊಂಡೇಶ್ವರ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.
ಕಳೆದ ಎರಡು ಬೀದರ ಉತ್ಸವಗಳ ಅನುಭವಗಳ ಹಿನ್ನೆಲೆಯಲ್ಲಿ ಈ ಬಾರಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಜಪೂತ ಕಾಲನಿಯಿಂದ ಹೊಸ ಸಂಪರ್ಕ ರಸ್ತೆ ಮಾಡಲಾಗಿದೆ. ಗಣ್ಯರ ಹಾಗೂ ಪಾಸುದಾರರ ವಾಹನಗಳ ನಿಲುಗಡೆಗೆ ಖಾಲಾ ಬುರುಜ್ ಪ್ರದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಗರದಿಂದ ಕೋಟೆಗೆ ಸಂಪರ್ಕ ಕಲ್ಪಿಸುವ ಟಸ್ಕರ ರಸ್ತೆಯ ಅಗಲೀಕರಣ ಮಾಡಲಾಗುತ್ತಿದೆ. ಇದೇ ರೀತಿ ಚೌಬಾರಾದಿಂದ ಕೋಟೆಯವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಚರಂಡಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. ಜನವರಿ 27, 28, ಮತ್ತು 29 ರಂದು ಬೀದರ್ ಉತ್ಸವ ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications