ಬೀದರ ಉತ್ಸವಕ್ಕೆ ಸಕಲ ಸಿದ್ಧತೆ
ಬೀದರ. ಜ. 23 : ಬೀದರ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಐತಿಹಾಸಿಕ ಬೀದರ ಕೊಟೆ ಸಂಪೂರ್ಣ ಸಜ್ಜಾಗುತ್ತಿದ್ದು, ಮೂರು ದಿನಗಳ ಸಾಂಸ್ಕೃತಿಕ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಬೀದರ ಉತ್ಸವಕ್ಕೆ ಪೂರ್ವಭಾವಿಯಾಗಿ ಬೀದರ ಕೋಟೆಯನ್ನು ಸ್ವಚ್ಚಗೊಳಿಸುವ ಕಾರ್ಯವನ್ನು ಹಲವಾರು ತಿಂಗಳುಗಳಿಂದ ಕೈಗೊಳ್ಳಲಾಗುತ್ತಿದ್ದು, ಕೋಟೆಯ ಒಳಗೆ ಜನರ ಸುಗಮ ಸಂಚಾರಕ್ಕೆ ಪೂರಕವಾಗಿ ಹೊಸ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ.
ಕೋಟೆಯ ಒಳಗೆ ಇರುವ ಬೊಮ್ಮಗೊಂಡೇಶ್ವರ ಕೆರೆಗೆ ಹೊಸ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿದೆ. ಕೆರೆಯ ಮೇಲ್ದಂಡೆಯಲ್ಲಿ ಕೆರೆಯ ವೀಕ್ಷಣೆಗಾಗಿ ಸ್ಥಳವನ್ನು ಸಜ್ಜುಗೊಳಿಸಲಾಗಿದ್ದು, ಕೆರೆಯ ಬಳಿಗೆ ತೆರಳಲು ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಬೊಮ್ಮಗೊಂಡೇಶ್ವರ ಕೆರೆಗೆ ಹೆಚ್ಚಿನ ಜನರನ್ನು ಆಕರ್ಷಿಸುವ ಉದ್ದೇಶದಿಂದ ಉತ್ಸವದ ಸಂದರ್ಭದಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಬೊಮ್ಮಗೊಂಡೇಶ್ವರ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಪರಿವರ್ತಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.
ಕಳೆದ ಎರಡು ಬೀದರ ಉತ್ಸವಗಳ ಅನುಭವಗಳ ಹಿನ್ನೆಲೆಯಲ್ಲಿ ಈ ಬಾರಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಜಪೂತ ಕಾಲನಿಯಿಂದ ಹೊಸ ಸಂಪರ್ಕ ರಸ್ತೆ ಮಾಡಲಾಗಿದೆ. ಗಣ್ಯರ ಹಾಗೂ ಪಾಸುದಾರರ ವಾಹನಗಳ ನಿಲುಗಡೆಗೆ ಖಾಲಾ ಬುರುಜ್ ಪ್ರದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಗರದಿಂದ ಕೋಟೆಗೆ ಸಂಪರ್ಕ ಕಲ್ಪಿಸುವ ಟಸ್ಕರ ರಸ್ತೆಯ ಅಗಲೀಕರಣ ಮಾಡಲಾಗುತ್ತಿದೆ. ಇದೇ ರೀತಿ ಚೌಬಾರಾದಿಂದ ಕೋಟೆಯವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಚರಂಡಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ. ಜನವರಿ 27, 28, ಮತ್ತು 29 ರಂದು ಬೀದರ್ ಉತ್ಸವ ನಡೆಯಲಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications