ಮನಮೋಹನ್ ಸಿಂಗ್ ಗೆ ಬೈಪಾಸ್ ಶಸ್ತ್ರಚಿಕಿತ್ಸೆ ಆರಂಭ
ನವದೆಹಲಿ, ಜ.24: ಪ್ರಧಾನಿ ಮನಮೋಹನ್ ಸಿಂಗ್(76) ಅವರಿಗೆ ಬೈಪಾಸ್ ಗ್ರಾಫ್ಟ್ ಶಸ್ತ್ರ ಚಿಕಿತ್ಸೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ(ಏಮ್ಸ್) ಶನಿವಾರ (ಜ.24) ಬೆಳಗ್ಗೆಯಿಂದ ಆರಂಭವಾಗಿದೆ. 1991ರಲ್ಲಿ ಅವರ ಹೃದಯಕ್ಕೆ ಜೋಡಿಸಿದ್ದ ಹಳೆ ಗ್ರಾಫ್ಟ್ ಗಳನ್ನು ತೆಗೆದು ಹೊಸ ಗ್ರಾಫ್ಟ್ ಗಳನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಇಂದು ಜೋಡಿಸಲಾಗುತ್ತದೆ. ಏಮ್ಸ್ ಮತ್ತು ಮುಂಬೈ ಏಷ್ಯನ್ ಹಾರ್ಟ್ ಸಂಸ್ಥೆಯ 11 ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯಲ್ಲಿ ನಿರತರಾಗಿದ್ದಾರೆ. ಖ್ಯಾತ ಹೃದಯ ಚಿಕಿತ್ಸಾ ತಜ್ಞ ಡಾ.ಪಿ.ಕೆ.ಪಾಂಡಾ ಈ ತಂಡದ ನೇತೃತ್ವ ವಹಿಸಿದ್ದಾರೆ.
ಇಂದು ಮುಂಜಾನೆ 7 ಗಂಟೆಗೆ ಆರಂಭವಾದ ಶಸ್ತ್ರ ಚಿಕಿತ್ಸೆ ಹಲವಾರು ಗಂಟೆಗಳ ಬಳಿಕ ಪೂರ್ಣವಾಗುತ್ತದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರಧಾನಿ ಮನಮೋಹನ್ ಸಿಂಗ್ ಅವರು 18 ವರ್ಷಗಳ ಹಿಂದೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರು ವರ್ಷಗಳ ಹಿಂದೆ ಮುಚ್ಚಿದ ರಕ್ತನಾಳಗಳ ಸುಸ್ಥಿತಿಗೆ ಆಂಜಿಯೋಪ್ಲಾಸ್ಟಿ ಮಾಡಿಸಿಕೊಂಡಿದ್ದರು. ಈಗ ಮತ್ತೊಮ್ಮೆ ಹೃದಯ ಶಸ್ತ್ರ ಚಿಕಿತ್ಸೆಗೆ ಮನಮೋಹನ್ ಸಿಂಗ್ ಒಳಗಾಗುತ್ತಿದ್ದಾರೆ.
2007ರಲ್ಲಿ ಪ್ರಾಸ್ಟೇಟ್(ಪುರುಷ ಜನನೇಂದ್ರಿಯಕ್ಕೆ ಸಂಬಂಧಿಸಿದ ಒಂದು ಗ್ರಂಥಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮೇ, 2008ರಲ್ಲಿ ಕಣ್ಣಿನ ಪೊರೆ ತೆಗೆಯಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಪ್ರಧಾನಿಗಳು ಬೈಪಾಸ್ ಸರ್ಜರಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿ ಅನುಪಸ್ಥಿತಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದೆ. ಪ್ರಧಾನಿ ಅವರ ಕರ್ತವ್ಯಗಳನ್ನು ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ನಿರ್ವಹಿಸಲಿದ್ದಾರೆ.
(ಏಜೆನ್ಸೀಸ್)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications