ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಆರೋಗ್ಯದ ಬಗ್ಗೆ ದೇವೇಗೌಡ ಕಳವಳ

By Staff
|
Google Oneindia Kannada News

ನವದೆಹಲಿ, ಜ.24: ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ಮಾಜಿ ಪ್ರಧಾನಿ ಮತ್ತು ಜನತಾದಳ (ಎಸ್) ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡಇಂದು ತೀವ್ರ ಕಳವಳ ವ್ಯಕ್ತಪಡಿಸಿದರು. ದೇವರ ದಯೆಯಿಂದ ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವೇಗೌಡರು ಹಾರೈಸಿದ್ದಾರೆ.

ಡಾ.ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಅವರಿಗೆ ಬರೆದಿರುವ ಪತ್ರದಲ್ಲಿ ಗೌಡರು, ಅವರ ಅವಿಶ್ರಾಂತ ದುಡಿಮೆಯ ಗುಣ ಮತ್ತು ಬಿಡುವಿಲ್ಲದ ಕಾರ್ಯಕ್ರಮಳಲ್ಲಿ ಆರೋಗ್ಯದ ಬಗ್ಗೆ ಹೇಳುತ್ತಿದ್ದರು. ಆದರೆ ಅವರ ಆರೋಗ್ಯ ಕ್ಷೀಣಿಸಿರುವ ಬಗ್ಗೆ ನಮಗೆ ತೀವ್ರ ನೋವುಂಟಾಗಿದೆ ಎಂದಿದ್ದಾರೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ನವದೆಹಲಿಯ ಸೌತ್ ಬ್ಲಾಕ್ ನಲ್ಲಷ್ಟೇ ಅಲ್ಲ ಪಾರ್ಲಿಮೆಂಟ್ ಒಳಗೂ ಹೊರಗೂ ಪ್ರಧಾನಿಗಳು ಲವಲವಿಕೆಯಿಂದ ಕಾಣಿಸಲಿ ಎಂದು ನಾವೆಲ್ಲ ಕಾತರದಿಂದ ಎದುರು ನೋಡುತ್ತಿದ್ದೇವೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಮನಮೋಹನ್ ಸಿಂಗ್ ಗೆ ಶಸ್ತ್ರಚಿಕಿತ್ಸೆ ಆರಂಭ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X