ದೆಹಲಿ: ವೈಮಾನಿಕದಾಳಿ ಸಂಭವ, ಬಿಗಿ ಭದ್ರತೆ
ನವದೆಹಲಿ, ಜ. 25 : ಗಣರಾಜ್ಯೋತ್ಸವ ದಿನದಂದು ಭಯೋತ್ಪಾದಕರು ವೈಮಾನಿಕ ದಾಳಿ ನಡೆಸುವ ಸಂಭವವಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಗರದಾದ್ಯಂತ ಭಾರೀ ಕಟ್ಟೆಚ್ಚರ ಏರ್ಪಡಿಸಿದೆ. ನವದೆಹಲಿ ಹಾಗೂ ಚಂಡೀಗಡ ನಗರಗಳ ಮೇಲೆ ಎರಡು ದಿನಗಳ ಕಾಲ ಹೆಲಿಕಾಪ್ಟರ್ ಹಾರಾಟವನ್ನು ನಿಷೇಧಗೊಳಿಸಲಾಗಿದೆ.
ಹೆಲಿಕಾಪ್ಟರ್ ಗಳನ್ನು ಅವಶ್ಯವಾಗಿ ಹಾರಾಟ ಮಾಡಬೇಕಾದ ಸಂದರ್ಭ ಎದುರಾದಲ್ಲಿ ಭದ್ರತಾ ಸಿಬ್ಬಂದಿಯ ಪರವಾನಿಗೆಯನ್ನು ಪಡೆದುಕೊಳ್ಳಬೇಕು ಎಂದು ವೈಮಾನಿಕ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಗಣರಾಜ್ಯೋತ್ಸವ ಅಂಗವಾಗಿ ಭಾರಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಅಹಿತಕರ ಘಟನೆಗೆ ಅಸ್ಪದವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಪಪಡಿಸಿದ್ದಾರೆ. ದೆಹಲಿ ನಗರವೊಂದರಲ್ಲಿ ಸುಮಾರು 198 ದೆಹಲಿ ಪೊಲೀಸ್ ಪಡೆ, 56 ಅರೆ ಸೇನಾಪಡೆ ತುಕಡಿಗಳನ್ನು ಗಸ್ತು ನಿಯೋಜಿಸಲಾಗಿದೆ.
ಬಾಂಗ್ಲಾದೇಶದ ಕಡೆಯಿಂದ ಅಸ್ಸಾಂ ಮೂಲಕ ದೆಹಲಿ ನಗರದೊಳಗೆ ಆರು ಉಗ್ರರು ನುಸುಳಿದ್ದಾರೆ. ವೈಮಾನಿಕ ದಾಳಿ ನಡೆಸುವ ಸಂಭವವಿದ್ದು, ಸೂಕ್ತ ರಕ್ಷಣೆಯನ್ನು ನಿಯೋಜನೆಗೆ ಗುಪ್ತಚರ ಇಲಾಖೆ ತಿಳಿಸಿತ್ತು. ದೇಶದ ಗಡಿ ಪ್ರದೇಶದಲ್ಲಿ ಭಾರಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರೂ ಉಗ್ರರು ಉಪಾಯದ ಮೂಲಕ ಭಾರತದೊಳಗೆ ಕಾಲಿಸಿದ್ದಾರೆ. ಯಾವುದೇ ಕಾರಣಕ್ಕೂ ಕೈಕಟ್ಟಿ ಕುಳಿತುಕೊಳ್ಳಬೇಡಿ ಎಂದು ಗಡಿ ರಾಜ್ಯಗಳ ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಮಣಿಪುರ್ ಮತ್ತು ತ್ರಿಪುರದಲ್ಲಿಯೂ ಉಲ್ಫಾ ಸೇರಿ ನಾಲ್ಕು ವಿಧ್ವಂಸಕ ಸಂಘಟನೆಗಳು ಗಣರಾಜ್ಯೋತ್ಸವವನ್ನು ಬಹಿಷ್ಕರಿಸಿದ್ದು, ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಈ ರಾಜ್ಯದಲ್ಲಿೂ ಭಾರಿ ಕಟ್ಟೆಚ್ಚರ ನಿಯೋಜಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಮಾಣಿಕ್ ಷಾ ಮೈದಾನದ ಪ್ರವೇಶ ಮಾಹಿತಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications