ಲೋಕಸಭೆ ಚುನಾವಣೆ, ಯಡಿಯೂರಪ್ಪ ಪುತ್ರ ಸ್ಪರ್ಧೆ ?

ಬೆಂಗಳೂರು, ಜ. 25 : ದೇವೇಗೌಡರು ಕುಟುಂಬ ರಾಜಕಾರಣಿ ಸರಿ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ಅದೇ ಸಾಗುತ್ತಿದ್ದಾರೆಯೇ. ಹೌದು ಎನ್ನುತ್ತಿವೆ ಮೂಲಗಳು. ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆನ್ನುವ ಒತ್ತಡ ಪಕ್ಷದಲ್ಲಿ ಹೆಚ್ಚುತ್ತಿದೆ.

ಶನಿವಾರ ಶಿವಮೊಗ್ಗ ಜಿಲ್ಲೆಯ ಕೆಲವು ಮುಖಂಡರ ನಿಯೋಗ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅವರನ್ನು ಭೇಟಿಯಾಗಿ ಈ ಸಂಬಂಧ ಒತ್ತಾಯಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಲಪ್ಪ, ಸಾಗರ ಸಚಿವ ಬೇಳೂರು ಗೋಪಾಲಕೃಷ್ಣ ಮತ್ತಿತರ ಮುಖಂಡರು ಸಿಎಂ ಮಗ ರಾಘವೇಂದ್ರ ಅವರಿಗೆ ಲೋಕಸಭೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಟಿಕೆಟ್ ಆಕಾಂಕ್ಷಿಯಾಗಿರುವ ಆಯುನೂರು ಮಂಜುನಾಥ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭದ್ರಾವತಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದರೆ ಯಡಿಯೂರಪ್ಪ ಅವರ ಪ್ರಭಾವವೂ ಬಲವಾಗಿ ಕೆಲಸ ಮಾಡಲಿದೆ ಎಂದು ಶಿವಮೊಗ್ಗ ನಿಯೋಗ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಯಡಿಯೂರಪ್ಪ ಅವರಿಗೆ ತನ್ನ ಮಗ ಚುನಾವಣೆಗೆ ನಿಲ್ಲುವುದು ಇಷ್ಟವಿಲ್ಲ. ವಿನಾಕಾರಣ ಪ್ರತಿಪಕ್ಷಗಳಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎನ್ನುವುದು ಅವರ ಅಭಿಪ್ರಾಯವಾಗಿದೆ. ಆದರೆ ಪಕ್ಷದಲ್ಲಿ ರಾಘವೇಂದ್ರ ಅವರನ್ನು ಅಖಾಡಕ್ಕೆ ಇಳಿಸಲು ಅನೇಕ ಮುಖಂಡರ ಉತ್ಸುಕರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಉತ್ತರ ಕರ್ನಾಟಕಕ್ಕೆ ಭರಪೂರ ಯೋಜನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+