ಗಣರಾಜ್ಯೋತ್ಸವ :ವಿಪತ್ತು ನಿರ್ವಹಣೆ ಘಟಕ

ಬೆಂಗಳೂರು, ಜ. 25 : ನಗರದ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿಪತ್ತು ನಿರ್ವಹಣಾ ಘಟಕ ಸ್ಥಾಪಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಸುಬ್ರಮಣ್ಯಂ ಅವರು ತಿಳಿಸಿದರು.

ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ಭಯೋತ್ಪಾದನೆ ಭೀತಿ ಹರಡಿರುವ ಹಿನ್ನೆಲೆಯಲ್ಲಿ ಜನತೆ ಕಾರ್ಯಕ್ರಮವನ್ನು ಭೀತಿಯಿಲ್ಲದೆ ವೀಕ್ಷಿಸಲು ಅವಕಾಶ ಮಾಡಿಕೊಡುವ ಸಂಬಂಧ ಮಾಣಿಕ್ ಷಾ ಕವಾಯತು ಮೈದಾನದ ಒಳಾಂಗಣ ಮತ್ತು ಹೊರಾಂಗಣದಲ್ಲಿ ವಿಪತ್ತು ನಿರ್ವಹಣಾ ಘಟಕ ಸ್ಥಾಪಿಸಲಾಗಿದೆ ಎಂದರು.

ಇದಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಂನಲ್ಲಿ ವೈರ್ ಲೆಸ್ ಉಪಕರಣ, ಎರಡು ದೂರವಾಣಿ ಸಂಪರ್ಕ ತೆಗೆದುಕೊಳ್ಳಲಾಗಿದೆ. ಒಟ್ಟು 10 ಇಲಾಖೆಗಳು, 18 ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ. ಒಳಾಂಗಣದಲ್ಲಿ 8 ಮತ್ತು ಹೊರಾಂಗಣದಲ್ಲಿ 8 ಆಂಬುಲೆನ್ಸ್ ವಾಹನ ಇರಿಸಲಾಗಿದೆ. ಐದು ಹಾಸಿಗೆಯುಳ್ಳ ಚಿಕಿತ್ಸಾ ಘಟಕದಲ್ಲಿ ವೈದ್ಯರು ಸೇರಿದಂತೆ 16 ಜನ ಕೆಲಸ ನಿರ್ವಹಿಸಲಿದ್ದಾರೆ. ಮತ್ತು 2 ಟೆಂಡರ್ ಒಂದು ವರುಣ ಮತ್ತು ಒಂದು ಅಗ್ನಿ ಸೇರಿದಂತೆ ಅಗ್ನಿ ಶಾಮಕ ವಾಹನಗಳ ವ್ಯವಸ್ಥೆ ಮಾಡಿದೆ.

ಹೊರಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ತುರ್ತು ಸ್ಪಂದನಾ ತಂಡವು ಇತರೆ ಇಲಾಖೆಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸಲಿದೆ. ಶಾಲಾ ಮಕ್ಕಳನ್ನು ಕರೆತರಲು 42 ಬಿ.ಎಂ.ಟಿ.ಸಿ. ಬಸ್ಸು ವ್ಯವಸ್ಥೆ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)
ಜ.26ರಂದು ವರ್ಷದ ಮೊದಲ ಸೂರ್ಯಗ್ರಹಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+