428 ಮಂದಿಗೆ ಶೌರ್ಯ ಪ್ರಶಸ್ತಿ ಘೋಷಣೆ
ನವದೆಹಲಿ, ಜ. 26 : ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣ ಅಪ್ಪಿದ ರಾಷ್ಟ್ರೀಯ ಭದ್ರತಾ ಪಡೆಯ ಮೇಜರ್ ಸಂದೀಪ್ ಉನ್ನಿಕೃಷ್ಣನ್. ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ಅಶೋಕ್ ಕಾಮ್ಟೆ ಹಾಗೂ ವಿಜಯ್ ಸಲಸ್ಕರ್ ಅವರಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮರಣೋತ್ತರ ಅಶೋಕಚಕ್ರ ಪ್ರಶಸ್ತಿ ಘೋಷಿಸಲಾಗಿದೆ.
ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಇಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಶಸ್ತ್ರಪಡೆ ಸಿಬ್ಬಂದಿಗೆ 9 ಮರಣೋತ್ತರ ಅಶೋಕ ಚಕ್ರ, 13 ಕೀರ್ತಿ ಚಕ್ರ ಪ್ರಶಸ್ತಿ ಸೇರಿದಂತೆ ಒಟ್ಟು 428 ಶೌರ್ಯ ಪ್ರಶಸ್ತಿಗಳಿಗೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಭಾರತೀಯ ಸೇನಾಪಡೆಯ ಕರ್ನಲ್ ಬೋಜನ್ ಥಾಮಸ್, ಹವಾಲ್ದಾರ್ ಬಹಾದೂರ್ ಸಿಂಗ್ ಬೋಹ್ರಾ, ಹವಾಲ್ದರ್ ಗಜೇಂದ್ರ ಸಿಂಗ್, ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ತುಕಾರಾಂ ಗೋಪಾಲ್ ಒಂಬ್ಳೆ, ದೆಹಲಿ ಪೊಲೀಸ್ ಇನ್ಸ್ ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರಿಗೆ ಮರಣೋತ್ತರ ಅಶೋಕ ಚಕ್ರ ನೀಡಿ ಗೌರವಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
ಪದ್ಮವಿಭೂಷಣ ಇಸ್ರೊಸಿಬ್ಬಂದಿಗೆ ಅರ್ಪಣೆ: ನಾಯರ್
ಮೇಜರ್ ಸಂದೀಪ್ ಗೆ ಅಶೋಕ ಚಕ್ರ ಗೌರವ












Click it and Unblock the Notifications