ಪರಿಸರ ಸ್ನೇಹಿ ಗಣಿಗಾರಿಕೆಯತ್ತ ಕುದುರೆಮುಖ
ಬೆಂಗಳೂರು, ಜ. 25: ಕುದುರೆಮುಖ ಅದಿರು ಕಂಪೆನಿ ಮತ್ತೆ ತಲೆ ಎತ್ತಲು ತವಕಿಸುತ್ತಿದೆ. ಮಂಗಳೂರಿನ ಘಟಕದ ಆಧುನೀಕರಣಕ್ಕಾಗಿ ಸುಮಾರು 800 ಕೋಟಿ. ರು ಹೂಡಲು ಮುಂದಾಗಿದೆ ಎಂದು ಕೆಐಒಸಿಎಲ್ ನ ಸಿಇಒ ಕೆ ರಂಗನಾಥ್ ಅವರು ತಿಳಿಸಿದ್ದಾರೆ. ಕುದುರೆಮುಖ ಐರನ್ ಓರ್ ಕಂಪೆನಿಗೆ ಈಗ ಕೆಐಒಸಿಎಲ್ ಎಂದು ಮರು ನಾಮಕರಣ ಮಾಡಲಾಗಿದೆ.
50 ಲಕ್ಷ ಟನ್ ಸಾಮರ್ಥ್ಯದಉಕ್ಕಿನ ಘಟಕವನ್ನು ಸುಮಾರು 9 ಸಾವಿರ ಕೋಟಿ ರು ವೆಚ್ಚದಲ್ಲಿ ನಿರ್ಮಿಸಲಾಗುವುದು. ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಈ ಘಟಕ ಸ್ಥಾಪನೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಘಟಕ ಸ್ಥಾಪನೆಗೆ ಸೂಕ್ತ ಸ್ಥಳ ಗುರುತಿಸುವ ಕಾರ್ಯಕ್ಕ್ಕೆ ಚಾಲನೆ ನೀಡಲಾಗಿದೆ, ಸರ್ಕಾರದ ಅನುಮತಿ ಕೋರಲಾಗಿದೆ ಎಂದರು.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ, ಛತ್ತೀಸ್ ಗಢ ಹಾಗೂ ಒರಿಸ್ಸಾದಲ್ಲಿ ಅದಿರು ಗಣಿಗಾರಿಕೆ ನಡೆಸಲಾಗುತ್ತಿದೆ. ಕಳೆದ ನಾಲ್ಕು ವರ್ಷದಲ್ಲಿ ಸಂಸ್ಥೆ ಪ್ರತಿವರ್ಷ 300 ರಿಂದ 400 ಕೋಟಿ ರು ವಹಿವಾಟು ನಡೆಸುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ವಹಿವಾಟಿನ ಪ್ರಮಾಣ ಕುಸಿಯುವ ಸಾಧ್ಯತೆ ಇದೆ ಎಂದು ಹೇಳಿದರು. ಕಳೆದ ವರ್ಷ ಸಂಸ್ಥೆ 15 ಕೋಟಿ ರು ಲಾಭ ಗಳಿಸಿತ್ತು. ಈ ಬಾರಿ ಅದರಲ್ಲಿ ಶೇ. 50 ರಷ್ಟು ಕಡಿಮೆಯಾಗಬಹುದು ಎಂದು ರಂಗನಾಥ್ ಹೇಳಿದರು.
ಪರಿಸರ ಸ್ನೇಹಿ ಗಣಿಗಾರಿಕೆ: ಚಿಕ್ಕಮಗಳೂರು ಜಿಲ್ಲೆ ಕುದುರೆಮುಖದಲ್ಲಿ ಗಣಿಗಾರಿಕೆಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ನಡೆದಿದೆ. ಅಲ್ಲಿನ ಪರಿಸರ ಹಾಗೂ ವನ್ಯಜೀವಿಗಳಿಗೆ ಹಾನಿಯಾಗದ ರೀತಿಯಲ್ಲಿ ಪರಿಸರ ಸ್ನೇಹಿಗಣಿಗಾರಿಕೆ ನಡೆಸಲು ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಾ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿ, ಅನುಮತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications