ಪರಿಸರ ಸ್ನೇಹಿ ಗಣಿಗಾರಿಕೆಯತ್ತ ಕುದುರೆಮುಖ
ಬೆಂಗಳೂರು, ಜ. 25: ಕುದುರೆಮುಖ ಅದಿರು ಕಂಪೆನಿ ಮತ್ತೆ ತಲೆ ಎತ್ತಲು ತವಕಿಸುತ್ತಿದೆ. ಮಂಗಳೂರಿನ ಘಟಕದ ಆಧುನೀಕರಣಕ್ಕಾಗಿ ಸುಮಾರು 800 ಕೋಟಿ. ರು ಹೂಡಲು ಮುಂದಾಗಿದೆ ಎಂದು ಕೆಐಒಸಿಎಲ್ ನ ಸಿಇಒ ಕೆ ರಂಗನಾಥ್ ಅವರು ತಿಳಿಸಿದ್ದಾರೆ. ಕುದುರೆಮುಖ ಐರನ್ ಓರ್ ಕಂಪೆನಿಗೆ ಈಗ ಕೆಐಒಸಿಎಲ್ ಎಂದು ಮರು ನಾಮಕರಣ ಮಾಡಲಾಗಿದೆ.
50 ಲಕ್ಷ ಟನ್ ಸಾಮರ್ಥ್ಯದಉಕ್ಕಿನ ಘಟಕವನ್ನು ಸುಮಾರು 9 ಸಾವಿರ ಕೋಟಿ ರು ವೆಚ್ಚದಲ್ಲಿ ನಿರ್ಮಿಸಲಾಗುವುದು. ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಈ ಘಟಕ ಸ್ಥಾಪನೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಘಟಕ ಸ್ಥಾಪನೆಗೆ ಸೂಕ್ತ ಸ್ಥಳ ಗುರುತಿಸುವ ಕಾರ್ಯಕ್ಕ್ಕೆ ಚಾಲನೆ ನೀಡಲಾಗಿದೆ, ಸರ್ಕಾರದ ಅನುಮತಿ ಕೋರಲಾಗಿದೆ ಎಂದರು.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ, ಛತ್ತೀಸ್ ಗಢ ಹಾಗೂ ಒರಿಸ್ಸಾದಲ್ಲಿ ಅದಿರು ಗಣಿಗಾರಿಕೆ ನಡೆಸಲಾಗುತ್ತಿದೆ. ಕಳೆದ ನಾಲ್ಕು ವರ್ಷದಲ್ಲಿ ಸಂಸ್ಥೆ ಪ್ರತಿವರ್ಷ 300 ರಿಂದ 400 ಕೋಟಿ ರು ವಹಿವಾಟು ನಡೆಸುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ವಹಿವಾಟಿನ ಪ್ರಮಾಣ ಕುಸಿಯುವ ಸಾಧ್ಯತೆ ಇದೆ ಎಂದು ಹೇಳಿದರು. ಕಳೆದ ವರ್ಷ ಸಂಸ್ಥೆ 15 ಕೋಟಿ ರು ಲಾಭ ಗಳಿಸಿತ್ತು. ಈ ಬಾರಿ ಅದರಲ್ಲಿ ಶೇ. 50 ರಷ್ಟು ಕಡಿಮೆಯಾಗಬಹುದು ಎಂದು ರಂಗನಾಥ್ ಹೇಳಿದರು.
ಪರಿಸರ ಸ್ನೇಹಿ ಗಣಿಗಾರಿಕೆ: ಚಿಕ್ಕಮಗಳೂರು ಜಿಲ್ಲೆ ಕುದುರೆಮುಖದಲ್ಲಿ ಗಣಿಗಾರಿಕೆಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ನಡೆದಿದೆ. ಅಲ್ಲಿನ ಪರಿಸರ ಹಾಗೂ ವನ್ಯಜೀವಿಗಳಿಗೆ ಹಾನಿಯಾಗದ ರೀತಿಯಲ್ಲಿ ಪರಿಸರ ಸ್ನೇಹಿಗಣಿಗಾರಿಕೆ ನಡೆಸಲು ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷಾ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿ, ಅನುಮತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications