ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ
ನವದೆಹಲಿ, ಜ. 26 : ಮಂಗಳೂರಿನ ಪಬ್ ವೊಂದರಲ್ಲಿ ಯುವಕ-ಯವತಿಯರ ಮೇಲೆ ಹಲ್ಲೆ ಮಾಡಿರುವ ಹಿಂದೂ ಸಂಘಟನೆಯ ಕಾರ್ಯಕರ್ತರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ರೇಣುಕಾ ಚೌಧರಿ ಇದೊಂದು ಕ್ರೂರ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತವನ್ನು ತಾಲೀಬಾನೀಕರಣಗೊಳಿಸುವ ಹುನ್ನಾರ ಇದಾಗಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ಮತ್ತು ದಾಳಿ ನಡೆಸಿದ ಶ್ರೀರಾಮಸೇನೆ ಸಂಘಟನೆಯಿಂದ ವಿವರಣೆ ಕೋರಿರುವುದಾಗಿಯೂ ಅವರು ಸುದ್ದಿಗಾರರಿಗೆ ತಿಳಿಸಿದರು. ತಪ್ಪಿತಸ್ಥ ದಾಳಿಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರು ಈ ಘಟನೆಯನ್ನು ಖಂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ದಾಳಿಯನ್ನು ವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತೆಯರು ಖಂಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮೀನಾಕ್ಷಿ ಲೇಖಿ, ಮಹಿಳಾ ಒಕ್ಕೂಟದ ಪ್ರದಾಮ ಕಾರ್ಯದರ್ಶಿ ಅನ್ನೀ ರಾಜಾ, ಸುಪ್ರಿಂಕೋರ್ಟ್ ಮಹಿಳಾ ವಕೀಲೆ ಕಾಮಿನಿ ಜೈಸ್ವಾಲ್ ಸೇರಿದಂತೆ ಹಲವಾರು ಮಹಿಳೆಯರು ಕಚೇರಿ, ಪಬ್ ಸೇರಿದಂತೆ ತಾವು ಬಯಸಿದಲ್ಲಿಗೆ ಹೋಗಲು ಸ್ವಾತಂತ್ರರು ಎಂದು ಪ್ರತಿಕ್ರಿಯಿಸಿದ್ದಾರೆ. ಈ ದಾಳಿಯನ್ನು ಶ್ರೀರಾಮಸೇನೆ ಮತ್ತಿತರ ಹಿಂದೂಪರ ಸಂಘಟನೆಗಳು ಸಮರ್ಥಿಸಿಕೊಂಡಿವೆ.
18 ಮಂದಿ ಸೆರೆ
ಮಂಗಳೂರು ನಗರದ ಅಮ್ನೇಶಿಯಾ ದಿಲಂಜ್ ಎಂಬ ಪಬ್ ಮೇಲೆ ನಡೆಸಿ, ದಾಂಧಲೆ ಎಸಗಿದ ಆರೋಪದಲ್ಲಿ ಶ್ರೀರಾಮಸೇನೆಯ ಸಹಸಂಚಾಲಕ ಸೇರಿ ಹದಿಮೂರು ಮಂದಿಯನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಸೇನೆಯ ಸಹಸಂಚಾಲಕ ಸುಭಾಷ್ ಪಡೀಲ್, ಶರತ್ ಪದವಿನಂಗಡಿ, ದಿನೇಶ್, ಹರೀಶ್, ಕೀರ್ತನರಾಜ್ ಶೆಟ್ಟಿ, ರಾಘವೇಂದ್ರ ಪೈ, ಜೀವನ್, ವಿನೋದ್ ಮತ್ತು ಪ್ರೀತೇಶ್ ಬಂಧಿತರು.
(ದಟ್ಸ್ ಕನ್ನಡ ವಾರ್ತೆ)
ಹುಡುಗಿಯರ ಥಳಿಸಿದ ರಾಮಸೇನಾ ಕಾರ್ಯಕರ್ತರು
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications