ಮಂಗಳೂರು ದಾಳಿಗೆ ಬಿಜೆಪಿ ಖಂಡನೆ
ಮಂಗಳೂರು, ಜ. 27 : ಮಂಗಳೂರಿನ ಬಲ್ಮಠ ರಸ್ತೆಯ ಪಬ್ ಮೇಲೆ ದಾಳಿ ಮಾಡಿ ಅಲ್ಲಿ ಕುಡಿದು ನರ್ತಿಸುತ್ತಿದ್ದ ಯವಕ ಯುವತಿಯರ ಮೇಲೆ ನಡೆದ ಹಲ್ಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಸಾದ ಅತ್ತಾವರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು 25 ಮಂದಿಯನ್ನು ಬಂಧಿಸಿದಂತಾಯಿತು. ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಶಹಬ್ಬಾಸ್ ಗಿರಿ ನೀಡಿದ್ದಾರೆ.
ಕಳೆದ ಶನಿವಾರ ಮಂಗಳೂರಿನ ಅಮ್ನೇಷಿಯಾ ಪಬ್ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ನಡೆಸಿದ್ದರು, ಅದು ರಾಷ್ಟ್ರೀಯ ಸುದ್ದಿಯಾಗಿ ಮಾರ್ಪಟ್ಟಿದೆ. ಸರ್ಕಾರದ ಮೇಲೆ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಗಳ ಬಂಧನಕ್ಕೆ ಆದೇಶ ನೀಡಿದ್ದರು. ಇದೊಂದು ದುರದೃಷ್ಟಕರ ಪ್ರಕರಣ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಮಂಗಳೂರು ಘಟನೆ ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದ ಅವರು, ಘಟನೆಗೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
(ದಟ್ಸ್
ಕನ್ನಡ
ವಾರ್ತೆ)
ಮಂಗಳೂರು
ಘಟನೆ,
ಕ್ರಮಕ್ಕೆ
ಸಿಎಂ
ಆದೇಶ
ಮಂಗಳೂರು
ಘಟನೆ
ಕ್ರೂರ:
ಸಚಿವೆ
ರೇಣುಕಾ