ಮಂಗಳೂರು ದಾಳಿಗೆ ಬಿಜೆಪಿ ಖಂಡನೆ
ಮಂಗಳೂರು, ಜ. 27 : ಮಂಗಳೂರಿನ ಬಲ್ಮಠ ರಸ್ತೆಯ ಪಬ್ ಮೇಲೆ ದಾಳಿ ಮಾಡಿ ಅಲ್ಲಿ ಕುಡಿದು ನರ್ತಿಸುತ್ತಿದ್ದ ಯವಕ ಯುವತಿಯರ ಮೇಲೆ ನಡೆದ ಹಲ್ಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಸಾದ ಅತ್ತಾವರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು 25 ಮಂದಿಯನ್ನು ಬಂಧಿಸಿದಂತಾಯಿತು. ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಶಹಬ್ಬಾಸ್ ಗಿರಿ ನೀಡಿದ್ದಾರೆ.
ಕಳೆದ ಶನಿವಾರ ಮಂಗಳೂರಿನ ಅಮ್ನೇಷಿಯಾ ಪಬ್ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ನಡೆಸಿದ್ದರು, ಅದು ರಾಷ್ಟ್ರೀಯ ಸುದ್ದಿಯಾಗಿ ಮಾರ್ಪಟ್ಟಿದೆ. ಸರ್ಕಾರದ ಮೇಲೆ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಗಳ ಬಂಧನಕ್ಕೆ ಆದೇಶ ನೀಡಿದ್ದರು. ಇದೊಂದು ದುರದೃಷ್ಟಕರ ಪ್ರಕರಣ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಮಂಗಳೂರು ಘಟನೆ ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದ ಅವರು, ಘಟನೆಗೆ ಬೇಕಿರುವ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ, ಕ್ರಮಕ್ಕೆ ಸಿಎಂ ಆದೇಶ
ಮಂಗಳೂರು ಘಟನೆ ಕ್ರೂರ: ಸಚಿವೆ ರೇಣುಕಾ
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications