ಹಿಂದುತ್ವ ಬಿಜೆಪಿಯ ಸ್ವತ್ತಲ್ಲ - ಎಚ್ ಡಿ ಕೆ
ಬೆಂಗಳೂರು, ಜ. 27 : ನಾನೂ ಒಬ್ಬ ಹಿಂದೂ, ನನಗೂ ಪೂಜೆ, ಪುನಸ್ಕಾರದಲ್ಲಿ ನಂಬಿಕೆ ಇದೆ, ಆದರೆ ಬೇರೆಯವರ ಭಾವನೆಗಳಿಗೆ ನೋವು ತರುವಂತಹ ಕೆಲಸಗಳನ್ನು ನಾವು ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಹಿಂದೂ ಸಂಸ್ಕೃತಿ ಉಳಿಸುವ ಹೆಸರಿನಲ್ಲಿ ಬಿಜೆಪಿ ಮತ್ತು ಸಂಘ ಪರಿವಾರಗಳು ದೌರ್ಜನ್ಯ ನಡೆಸುತ್ತಿದೆ ಎಂದು ಆಪಾದಿಸಿದ್ದಾರೆ. ಹಿಂದುತ್ವ, ಹಿಂದೂ ಸಂಸ್ಕೃತಿ ಯಾರ ಮನೆಯ ಸ್ವತ್ತೂ ಅಲ್ಲ ಅಥವಾ ಸಂಘ ಪರಿವಾರಗಳು ಅದನ್ನು ಗುತ್ತಿಗೆಯನ್ನೂ ಪಡೆದುಕೊಂಡಿಲ್ಲ ಎಂದು ಹರಿಹಾಯ್ದರು.
ಮಂಗಳೂರಿನಲ್ಲಿ ನಡೆದಿರುವ ಪಬ್ ಮೇಲಿನ ದಾಳಿ ವಿಷಾದನೀಯ ಎಂದು ಜನತಾದಳ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದರು. ದಾಳಿಗೊಳಗಾದ ಪಬ್ ನಲ್ಲಿ ಯಾವುದೇ ಅಶ್ಲೀಲ ನೃತ್ಯ ಪ್ರದರ್ಶನ ಮಾಡುತ್ತಿದ್ದ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗಿಲ್ಲ, ಆದರೂ ಕೂಡ ಶ್ರೀರಾಮ ಸೇನೆಯ ಕಾರ್ಯಕರ್ತರು ಹಠಾತ್ ದಾಳಿ ನಡೆಸಿರುವುದು ಅನಾಗರಿಕತೆಯ ಪರಮಾವಧಿ ಜೊತೆಗೆ ತಲೆತಗ್ಗಿಸುವಂತಹದ್ದು ಕೆಲಸವಾಗಿದೆ ಎಂದು ಹೇಳಿದರು.
ಈ ವಿಷಯವನ್ನು ಅನಾವಶ್ಯಕವಾಗಿ ದೊಡ್ಡದು ಮತ್ತು ರಾಜಕೀಯ ಮಾಡಲಾಗುತ್ತಿದೆ ಎನ್ನುವ ಗ್ರಹ ಸಚಿವರ ಹೇಳಿಕೆಯನ್ನು ಖಂಡಿಸಿದ ಕುಮಾರಸ್ವಾಮಿ, ಸರಕಾರವೇ ಇಂತಹ ಘಟನೆಗಳಿಗೆ ಕುಮ್ಮುಕ್ಕು ನೀಡುತ್ತಿದೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ವ್ಯಂಗ್ಯವಾಡಿದರು.
(ದಟ್ಸ್ ಕನ್ನಡ ವಾರ್ತೆ)
ಮಂಗಳೂರು ಘಟನೆ, ಸಿಎಂ ರಾಜೀನಾಮೆಗೆ ಆಗ್ರಹ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications