ಪಬ್ ದಾಳಿ ಶ್ರೀರಾಮ ಸೇನೆ ಸಂಚಾಲಕ ಬಂಧನ
ಮಂಗಳೂರು ಜ 27 : ಮಂಗಳೂರು ಪಬ್ ಮೇಲಿನ ದಾಳಿ ಸಂಬಂಧ ಶ್ರೀರಾಮ ಸೇನೆಯ ಸಹಸಂಚಾಲಕ ಪ್ರಸಾದ್ ಅತ್ತವಾರ್, ಜಿಲ್ಲಾ ಸಂಚಾಲಕ ಸುಭಾಶ್ ಪಡೀಲ್, ಜಿಲ್ಲ ಉಪ ಸಂಚಾಲಕ ಕಿಶೋರ್, ನಗರ ಸಂಚಾಲಕ ಗಣೇಶ್ ಹಾಗು 25 ಮಂದಿ ಸಂಘದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಯವತಿಯರು ಕುಡಿದು, ಅರೆಬೆತ್ತಲೆ ನರ್ತನದಲ್ಲಿ ತೊಡಗಿದ್ದಾಗ ಶ್ರೀರಾಮ ಸೇನೆ ಕಾರ್ಯಕರ್ತರು ಪಬ್ ಮೇಲೆ ದಾಳಿ ನಡೆಸಿದ್ದರು.
ರಾಷ್ಟ್ರಮಟ್ಟದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ಸರಕಾರ, ಸೇನೆಯ ಪ್ರಮುಖ ನಾಯಕರನ್ನು ನಿನ್ನೆ ತಡರಾತ್ರಿ ಬಂಧಿಸಿದೆ. ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಈ ಘಟನೆಯನ್ನು ಮಾದ್ಯಮಗಳ ಮುಂದೆ ಸಮರ್ಥಿಸಿಕೊಂಡಿದ್ದರು. ದಾಳಿಯಲ್ಲಿ ಶಾಮೀಲಾದವರ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಬಂಧಿತರ ವಿರುದ್ಧ ಗೂಂಡಾ ಕಾಯ್ದೆ ಬಳಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿಯೂ ರಾಜ್ಯ ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.
ಈ ಮಧ್ಯೆ ಪಬ್ ಮೇಲೆ ಯುವತಿಯರ ಮೇಲಿನ ಹಲ್ಲೆ ಖಂಡಿಸಿ ಮಂಗಳೂರಿನ ಕಾಲೇಜುಗಳು ಮಂಗಳವಾರ ಬಂದ್ಗೆ ಕರೆ ನೀಡಿದ್ದರೆ, ಇತ್ತ ಶ್ರೀರಾಮ ಸೇನೆಯ ಕಾರ್ಯಕರ್ತರ ಬಂಧನ ವಿರೋಧಿಸಿ ರಾಜ್ಯಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳು ಮತ್ತು ಲಾರಿಯೊಂದಕ್ಕೆ ದುರ್ಷ್ಕರ್ಮಿಗಳು ಕಲ್ಲು ತೂರಿ ಬೆಂಕಿ ಹಚ್ಚುವ ಪ್ರಯತ್ನ ವರದಿಯಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications