ನಮಗೇಕೆ ಪದ್ಮ ಪ್ರಶಸ್ತಿ ಇಲ್ಲ: ವಿಜೇಂದರ್, ಸುಶೀಲ್
ನವದೆಹಲಿ, ಜ. 27 : ಬೀಜಿಂಗ್ ಒಲಿಪಿಂಕ್ಸ್ ಕ್ರೀಡಾಕೂಟದಲ್ಲಿ ಕುಸ್ತಿ ಮತ್ತು ಬಾಕ್ಸಿಂಗ್ ನಲ್ಲಿ ಪದಕ ಗಳಿಸುವ ಮೂಲಕ ಭಾರತೀಯರೆಲ್ಲರೂ ಹೆಮ್ಮೆಪಡುವಂತಹ ಸಾಧನೆ ಮಾಡಿದ್ದ ವಿಜೇಂದರ್ ಸಿಂಗ್ ಮತ್ತು ಸುಶೀಲ್ ಕುಮಾರ್ ಅವರಿಗೆ ತೀವ್ರ ನಿರಾಶೆ ಉಂಟಾಗಿದೆ. 2008ರ ಸಾಲಿನ ಪದ್ಮಶ್ರೀ ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಈ ಇಬ್ಬರಿಗೆ ಪ್ರಶಸ್ತಿ ಸಿಗದಿರುವುದು ಅವರ ನಿರಾಶೆಗೆ ಪ್ರಮುಖ ಕಾರಣವಾಗಿದೆ.
ಬಹಿರಂಗವಾಗಿ ತಮ್ಮ ಅಸಮಾಧಾನ ತೋಡಿಕೊಂಡಿರುವ ಕುಸ್ತಿ ಪಟು ಸುಶೀಲ್ ಕುಮಾರ್, ಈ ಸಲದ ಪದ್ಮಶ್ರೀ ಪ್ರಶಸ್ತಿ ಪಟ್ಟಿಯಲ್ಲಿ ನನ್ನ ಹೆಸರು ಸೇರ್ಪಡೆಯಾಗಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಪಟ್ಟಿಯಿಂದ ನನ್ನ ಹೆಸರು ಮಾಯವಾಗಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಭಾರತೀಯರು ಹೆಮ್ಮೆ ಪಡುವಂತಹ ಸಾಧನೆ ಮಾಡಿದ ನಮಗೆ ಸರ್ಕಾರದ ಈ ರೀತಿ ಅವಮಾನ ಮಾಡಬಾರದು ಎಂದು ಕಿಡಿಕಾರಿದ್ದಾರೆ. ಒಲಿಂಪಿಕ್ಸ್ ಪ್ರಶಸ್ತಿ ನೀಡುವಲ್ಲಿ ತಾರತಮ್ಯ ಎಣಿಸಲಾಗಿದೆ. ಕಾಣದ ಕೈಗಳಿಂದ ಇದರಲ್ಲಿ ಬಲವಾಗಿ ಕೆಲಸ ಮಾಡಿವೆ ಎಂದು ಅವರು ಆರೋಪಿಸಿದ್ದಾರೆ.
ಬಾಕ್ಸಿಂಗ್ ಪಟು ವಿಜೇಂದರ್ ಕೂಡಾ ಇದೇ ಅನಿಸಿಕೆ ವ್ಯಕ್ತಪಡಿಸುತ್ತಾರೆ. ಕ್ರಿಕೆಟ್ಟಿಗ ಮಹೇಂದ್ರ ಸಿಂಗ್ ಧೋನಿ, ಹರ್ಭಜನ್ ಸಿಂಗ್ ಹಾಗೂ ನಟಿ ಐಶ್ವರ್ಯ ರೈ ಗಿಂತ ನಾವು ಯಾವುದರಲ್ಲಿ ಕಡಿಮೆ ಸಾಧನೆ ಮಾಡಿದ್ದೇವೆ. ಒಲಿಂಪಿಕ್ಸ್ ಪದವಿ ಗಳಿಸಿರುವ ಅಭಿನವ್ ಬಿಂದ್ರಾಗೆ ಪದ್ಮವಿಭೂಷಣ ನೀಡುವುದಾದರೆ ನಾವು ಕೂಡ ಅದೇ ಕ್ರೀಡಾಕೂಟದಲ್ಲಿ ಪದಕ ಗಳಿಸಿರುವೆ, ನಮಗೇಕೆ ಪ್ರಶಸ್ತಿ ಇಲ್ಲ ಎಂದು ಪ್ರಶ್ನಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪದ್ಮವಿಭೂಷಣ ಇಸ್ರೊಸಿಬ್ಬಂದಿಗೆ ಅರ್ಪಣೆ: ನಾಯರ್
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications