ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿನಾನೇ: ಸಿದ್ದು
ಹುಬ್ಬಳ್ಳಿ, ಜ. 27 : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಹೊಡೆದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ನಿಂತ ನೀರಲ್ಲ ಎಂದರು. ರಾಜಕೀಯ ಧೃವೀಕರಣ ರಾಜಕಾರಣದಲ್ಲಿ ಹೊಸದಲ್ಲ. ಮುಂದಿನ ದಿನಗಳಲ್ಲಿ ಬದಲಾವಣೆ ಆದರೂ ಆಗಬಹುದು ಎಂದು ಸ್ಪಷ್ಟಪಡಿಸಿದರು. ನಾನು ಈಗಾಗಲೇ ಉಪಮುಖ್ಯಮಂತ್ರಿಯಾಗಿರುವೆ, ಇನ್ನೇನಿದ್ದರೂ ಮುಖ್ಯಮಂತ್ರಿಯಾಗುವುದು ನನ್ನ ಏಕೈಕ ಗುರಿ ಎಂದು ಹೇಳಿದರು.
ಸದ್ಯ ಕಾಂಗ್ರೆಸ್ ನಲ್ಲಿಯೇ ಇರುವೆ, ಮುಂದೆಯೂ ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ ಎಂದ ಸಿದ್ದರಾಮಯ್ಯ ನೂತನ ಪಕ್ಷ ರಚನಗೆ ಸಂಬಂಧಿಸಿದಂತೆ ಎಲ್ಲ ಉಹಾಪೋಹಗಳನ್ನು ತಳ್ಳಿಹಾಕಿದರು. ಆದರೆ, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗ ಎಂದೇ ಗುರುತಿಸಿಕೊಂಡಿರುವ ವರ್ತೂರು ಪ್ರಕಾಶ ಮಾತ್ರ ವಿಭಿನ್ನ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಜನವರಿ 31 ಕ್ಕೆ ಸಿದ್ದರಾಮಯ್ಯ ನೂತನ ಪಕ್ಷ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ ಅನೇಕ ದಿನಗಳಿಂದ ವರ್ತೂರು ಪ್ರಕಾಶ್ ಇಂತಹ ಹೇಳಿಕೆಯನ್ನು ನೀಡುತ್ತಲೇ ಬಂದಿರುವುದು ಗಮನಾರ್ಹವಿಷಯವಾಗಿದೆ.
(ದಟ್ಸ್ ಕನ್ನಡ ವಾರ್ತೆ)