ಲೋಕಸಭಾ ಚುನಾವಣೆಗೆ ಬಿಜೆಪಿ ಪಟ್ಟಿ
ಬೆಂಗಳೂರು, ಜ. 29 : ಮುಂಬರುವ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಆರಿಸುವ ಭರಾಟೆ ರಾಜ್ಯದಲ್ಲಿ ಆರಂಭವಾಗಿದೆ. ಚುನಾವಣಾ ದಿನಾಂಕಗಳು ಇನ್ನೂ ಪ್ರಕಟವಾಗಿಲ್ಲದಿದ್ದರೂ 2009ರ ಏಪ್ರಿಲ್ ಮೇ ತಿಂಗಳ ನಡುವೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಚುನಾವಣಾ ಆಯೋಗದಿಂದ ಹೊರಬಿದ್ದಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಆರಿಸುವ ಪ್ರಕ್ರಿಯೆ ಭಾರತೀಯ ಜನತಾ ಪಕ್ಷದಲ್ಲಿ ಈಗಾಗಲೇ ಆರಂಭವಾಗಿದೆ. ಹುರಿಯಾಳುಗಳ ಹೆಸರುಗಳನ್ನು ಇತ್ಯರ್ಥಗೊಳಿಸುವ ಸಭೆ ಬುಧವಾರ ಬೆಂಗಳೂರಿನಲ್ಲಿ ಜರುಗಿತು. ಕೆಲವು ಕ್ಷೇತ್ರಗಳಿಗೆ ಪಕ್ಷವು ತನ್ನ ಅಭ್ಯರ್ಥಿಗಳ ಹೆಸರುಗಳನ್ನೂ ಬಹುತೇಕ ನಿರ್ಧರಿಸಿದ್ದು ಅವು ಇಂತಿವೆ :
ಪಿ.ಜಿ. ಗದ್ದಿಗೌಡರ್ (ಬಾಗಲಕೋಟೆ), ಡಿ.ಎಸ್. ವೀರಯ್ಯ (ಕೋಲಾರ), ಅನಂತ್ ಕುಮಾರ್ (ಬೆಂಗಳೂರು ದಕ್ಷಿಣ), ಸುರೇಶ್ ಅಂಗಡಿ (ಬೆಳಗಾವಿ), ಸಿ.ಎಚ್. ವಿಜಯಶಂಕರ್ (ಮೈಸೂರು), ಡಿ.ಸಿ. ತಮ್ಮಣ್ಣ (ಮಂಡ್ಯ), ಡಿ. ವಿ. ಸದಾನಂದಗೌಡ (ಉಡುಪಿ-ಚಿಕ್ಕಮಗಳೂರು), ಜಿ.ಎಂ. ಸಿದ್ದೇಶ್ (ದಾವಣಗೆರೆ), ರಮೇಶ್ ಜಿಗಜಿಣಗಿ (ವಿಜಾಪುರ), ರಾಜಾ ಅಮರೇಶ್ ನಾಯಕ್ (ರಾಯಚೂರು), ಪ್ರಹ್ಲಾದ ಜೋಷಿ (ಧಾರವಾಡ), ಅನಂತ ಕುಮಾರ್ ಹೆಗಡೆ (ಉತ್ತರ ಕನ್ನಡ), ರೇವಾ ನಾಯ್ಕ್ ಬೆಳಮಗಿ (ಕಲ್ಬುರ್ಗಿ), ವಿ. ಧನಂಜಯ ಕುಮಾರ್ (ದಕ್ಷಿಣ ಕನ್ನಡ).
ಇನ್ನುಳಿದ ಕೆಲವು ಲೋಕಸಭಾ ಕ್ಷೇತ್ರಗಳಿಗೆ ನಾನಾ ಹೆಸರುಗಳು ಓಡಾಡುತ್ತಿವೆ. ಆದರೆ ಯಾರ ಹೆಸರನ್ನೂ ಇನ್ನೂ ಅಂತಿಮಗೊಳಿಸಿಲ್ಲ. ಕೆಲವು ಊಹೆಗಳ ಪ್ರಕಾರ ಬಳ್ಳಾರಿಗೆ ಶ್ರೀರಾಮುಲು, ಬೀದರ್ ಗೆ ಗುರುಪಾದಪ್ಪ ನಾಗಮಾರಪಲ್ಲಿ, ತುಮಕೂರಿನಲ್ಲಿ ಜಗ್ಗೇಶ್ ಅಥವಾ ಕಿರಣ್ ಕುಮಾರ್, ಚಿತ್ರದುರ್ಗಕ್ಕೆ ಜನಾರ್ಧನ ಸ್ವಾಮಿ, ಶಿವಮೊಗ್ಗಕ್ಕೆ ವಡ್ನಾಳ್ ರಾಜಣ್ಣ ಮತ್ತು ಹಾಸನಕ್ಕೆ ಬಿ. ಶಿವರಾಂ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.
ಹೆಸರಾಂತ ಪತ್ರಕರ್ತ ಕಣಕ್ಕೆ? : ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ ಕ್ಷೇತ್ರಗಳಿಗೆ ವಿಪರೀತ ಪೈಪೋಟಿ ಕಂಡುಬಂದಿದ್ದು ಹೆಸರುಗಳನ್ನು ಇತ್ಯರ್ಥಗೊಳ್ಸುವುದು ಹೈಕಮಾಂಡಿಗೆ ತಲೆನೋವಾಗಿದೆ ಎಂದು ಶಂಕರಪುರಂ ನಿವಾಸಿ ಭಾಜಪ ಕಾರ್ಯಕರ್ತರೊಬ್ಬರು ದಟ್ಸ್ ಕನ್ನಡಕ್ಕೆ ತಿಳಿಸಿದರು. ಕನ್ನಡದ ಹೆಸರಾಂತ ಪತ್ರಕರ್ತರೊಬ್ಬರು ಬೆಂಗಳೂರಿನಿಂದ ಸ್ಪರ್ಧಿಸಲು ಹಾತೊರೆಯುತ್ತಿದ್ದಾರೆಂದು ತಿಳಿದುಬಂದಿದೆ! ಆದರೆ, ಯಡಿಯೂರಪ್ಪ ಅವರಿಗೆ ಆ ಪತ್ರಕರ್ತರ ಉಮೇದುವಾರಿಕೆ ಬಗ್ಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ. ಇನ್ನೊಂದು ಮೂಲಗಳ ಪ್ರಕಾರ, ಬೆಂಗಳೂರು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗದ ಟಿಕೆಟ್ ನೀಡಲಾಗುವುದೆಂಬ ಸುದ್ದಿ ಹರಡಿತ್ತು. ಆದರೆ, ಪಕ್ಷದ ನಾಯಕರ ಸಂಬಂಧಿಕರಿಗೆ, ಮಕ್ಕಳಿಗೆ ಟಿಕೆಟ್ ಕೊಡಬಾರದೆಂಬ ಕೂಗು ಎದ್ದಿದ್ದರಿಂದ ಅವರ ಹೆಸರನ್ನು ಕೈಬಿಡಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications