ರಾಜ್ಯದಲ್ಲಿ ಮೇತಾಸ್ ತಲೆ ಹಾಕುವಂತಿಲ್ಲ
ಬೆಂಗಳೂರು, ಜ. 30: ಶಿವಮೊಗ್ಗ ಹಾಗೂ ಗುಲ್ಭರ್ಗಾ ವಿಮಾನ ನಿಲ್ದಾಣ ನಿರ್ಮಾಣ ಸೇರಿದಂತೆ ರಾಜ್ಯದಲ್ಲಿ ಮೇತಾಸ್ ನ ಎಲ್ಲಾ ಯೋಜನೆಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದರು. ಸತ್ಯಂ ಕಂಪ್ಯೂಟರ್ ಹಗರಣ ಆರೋಪಿ ಸಂಸ್ಥೆಯ ಮಾಜಿ ಸಿಇಒ ರಾಮಲಿಂಗರಾಜು ಅವರ ಮಗ ತೇಜ ರಾಜು ಅವರು ಮೇತಾಸ್ ಸಂಸ್ಥೆಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜು ಸೇರಿದಂತೆ ಆರೋಪ ಹೊತ್ತಿರುವ ಅವರ ಕುಟುಂಬದ ಸದಸ್ಯರ ಜಾಮೀನು ಅರ್ಜಿ ವಿಚಾರಣೆ ಇನ್ನೂ ಬಾಕಿಯಿದೆ.
ಸತ್ಯಂ ಕಂಪ್ಯೂಟರ್ಸ್ ನ ಸಹ ಸಂಸ್ಥೆಯಾದ ಮೇತಾಸ್ ಕೂಡ ಹಗರಣದಲ್ಲಿ ಪಾಲ್ಗೊಂಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇತಾಸ್ ಸಂಸ್ಥೆಗೆ ನೀಡಿದ್ದ ಎಲ್ಲಾ ಗುತ್ತಿಗೆ ಕಾರ್ಯವನ್ನು ನಿಲ್ಲಿಸಲು ಸೂಚಿಸಲಾಗಿದೆ. ಮೇತಾಸ್ ಜೊತೆ ಗುತ್ತಿಗೆ ಪಡೆದ ಇತರ ಸಂಸ್ಥೆಗಳು ಸದ್ಯಕ್ಕೆ ಕಾರ್ಯ ನಿರ್ವಹಿಸಬಹುದಾಗಿದೆ. ಆದರೆ ಪುನಃ ಟೆಂಡರ್ ಕರೆದು ಮೇತಾಸ್ ಗೆ ನೀಡಿದ್ದ ಗುತ್ತಿಗೆ ಯಾವ ಸಂಸ್ಥೆಗೆ ನೀಡಲಾಗುವುದು ಎಂಬುದರ ಬಗ್ಗೆ ಗೃಹ ಕಾರ್ಯದರ್ಶಿಗಳು ವಿವರ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹೇಳಿದರು.
ಮೇತಾಸ್ ಗೆ ನೀಡಿದ್ದ ವಿಜಯನಗರ ಟೌನ್ ಶಿಪ್ ಯೋಜನೆಯನ್ನು ಮುಂಬೈ ಮೂಲದ ಜೆಎಸ್ ಡಬ್ಲ್ಯು ಸ್ಟೀಲ್ ಸಂಸ್ಥೆ ಮುಂದುವರಿಸಿಕೊಂಡು ಹೋಗುವ ಸಾಧ್ಯತೆಯಿದೆ. ರಸ್ತೆ ನವೀಕರಣ ಹಾಗೂ ದುರಸ್ತಿ ಯೋಜನೆಗಳನ್ನು ನಾಗಾರ್ಜುನ ಸಮೂಹ ಸಂಸ್ಥೆ ಪೂರೈಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
(ದಟ್ಸ್ ಕನ್ನಡವಾರ್ತೆ)
ಪೂರಕ ಓದಿಗೆ:
15 ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಅಸ್ತು
ಬೆಂಗಳೂರು ಸಾರಿಗೆ ಸಂಚಾರದ ಅಧ್ಯಯನ
ರಾಜು ಪಂಗಡಕ್ಕೆ ಜಾಮೀನು ಸಾಧ್ಯವಿಲ್ಲ ;ಕೋರ್ಟ್
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications