ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ
ನವದೆಹಲಿ, ಜ.31:ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗದಲ್ಲಿನ ಬಿರುಕು ಬಹಿರಂಗಗೊಂಡಿದೆ. ಚುನಾವಣಾ ಆಯುಕ್ತ ನವೀನ್ ಚಾವ್ಲಾರನ್ನು ಆಯೋಗದಿಂದ ತೆಗೆದು ಹಾಕಬೇಕು ಎಂದು ಮುಖ್ಯ ಚುನವಣಾ ಆಯುಕ್ತ ಎನ್.ಗೋಪಾಲಸ್ವಾಮಿ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.
ರಾಜಕೀಯ ಪಕ್ಷ ಒಂದನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂಬುದು ಪ್ರಮುಖ ಆರೋಪ. ಈ ಕುರಿತು ಬಿಜೆಪಿ ನೀಡಿರುವ ದೂರಿನ ಆಧಾರದಲ್ಲಿ ಗೋಪಾಲಸ್ವಾಮಿ ಈ ನಿರ್ಧಾರ ಕೈಗೊಂಡರು. ಕಾಂಗ್ರೆಸ್ ಪಕ್ಷವನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿ ದೂರಿತ್ತು. ತಾನು ತನ್ನ ಕರ್ತವ್ಯ ನಿಭಾಯಿಸುತ್ತಿರುವುದಾಗಿ ಗೋಪಾಲಸ್ವಾಮಿ ಸ್ಪಷ್ಟಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
ಚುನಾವಣಾ ಆಯೋಗದಲ್ಲಿ ಭಿನ್ನ್ನಮತ ಸ್ಫೋಟಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಭಿನ್ನಾಭಿಪ್ರಾಯಗಳು ತಲೆದೋರಿದ್ದವು. 2007ರ ಉತ್ತರ ಪ್ರದೇಶ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತ್ತು ಮೇ ತಿಂಗಳಲ್ಲಿ ಕರ್ನಾಟಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಇವರಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿದ್ದವು.
(ಏಜೆನ್ಸೀಸ್)











Click it and Unblock the Notifications