ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ
ನವದೆಹಲಿ, ಜ.31:ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗದಲ್ಲಿನ ಬಿರುಕು ಬಹಿರಂಗಗೊಂಡಿದೆ. ಚುನಾವಣಾ ಆಯುಕ್ತ ನವೀನ್ ಚಾವ್ಲಾರನ್ನು ಆಯೋಗದಿಂದ ತೆಗೆದು ಹಾಕಬೇಕು ಎಂದು ಮುಖ್ಯ ಚುನವಣಾ ಆಯುಕ್ತ ಎನ್.ಗೋಪಾಲಸ್ವಾಮಿ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.
ರಾಜಕೀಯ ಪಕ್ಷ ಒಂದನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂಬುದು ಪ್ರಮುಖ ಆರೋಪ. ಈ ಕುರಿತು ಬಿಜೆಪಿ ನೀಡಿರುವ ದೂರಿನ ಆಧಾರದಲ್ಲಿ ಗೋಪಾಲಸ್ವಾಮಿ ಈ ನಿರ್ಧಾರ ಕೈಗೊಂಡರು. ಕಾಂಗ್ರೆಸ್ ಪಕ್ಷವನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿ ದೂರಿತ್ತು. ತಾನು ತನ್ನ ಕರ್ತವ್ಯ ನಿಭಾಯಿಸುತ್ತಿರುವುದಾಗಿ ಗೋಪಾಲಸ್ವಾಮಿ ಸ್ಪಷ್ಟಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
ಚುನಾವಣಾ ಆಯೋಗದಲ್ಲಿ ಭಿನ್ನ್ನಮತ ಸ್ಫೋಟಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಭಿನ್ನಾಭಿಪ್ರಾಯಗಳು ತಲೆದೋರಿದ್ದವು. 2007ರ ಉತ್ತರ ಪ್ರದೇಶ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತ್ತು ಮೇ ತಿಂಗಳಲ್ಲಿ ಕರ್ನಾಟಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಇವರಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿದ್ದವು.
(ಏಜೆನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications