ನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ

ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ ಗೌಡ ಅವರ ಸಮ್ಮುಖದಲ್ಲಿ ವಿಧ್ಯುಕ್ತವಾಗಿ ಬಿಜೆಪಿ ಸೇರಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಧನಂಜಯ ಕುಮಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ವೆಂಕಟಾಚಲ ಅವರು, ತಾವು ರಾಜಕೀಯ ಸೇರಿರುವುದು ಯಾವುದೇ ಸ್ವಾರ್ಥಕ್ಕಾಗಿ ಅಲ್ಲ, ಜನಸೇವೆ ಮತ್ತು ಭ್ರಷ್ಟಾಚಾರ ನಿರ್ಮೂಲನೆಯೇ ಮೂಲ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ಭ್ರಷ್ಟಾಚಾರ ವ್ಯವಸ್ಥೆಯ ಪ್ರತಿ ಹಂತದಲ್ಲೂ ತನ್ನ ಬಾಹುವನ್ನು ಚಾಚಿಕೊಂಡಿದೆ. ರಾಜಕೀಯ ಇಚ್ಛಾಶಕ್ತಿ ಇದ್ದರೆ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ. ಭಾರತೀಯ ಜನತಾ ಪಕ್ಷದಲ್ಲಿ ಆ ಇಚ್ಛಾಶಕ್ತಿ ಇದೆ ಎಂದು ಅವರು ಮನದಾಳದ ಇಂಗಿತ ಅರುಹಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications