ಸಂಪಂಗಿಗೆ ಸಹಕರಿಸಿದ ಇನ್ಸ್ಪೆಕ್ಟರುಗಳ ಅಮಾನತು
ಬೆಂಗಳೂರು, ಜ. 31 : 5 ಲಕ್ಷ ರು. ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಕೆಜಿಎಫ್ ಶಾಸಕ ವೈ ಸಂಪಂಗಿಗೆ ಭ್ರಷ್ಟಾಚಾರದಲ್ಲಿ ಸಹಕರಿಸಿರುವರೆಂಬ ಆರೋಪದ ಮೇಲೆ ಕೆಜಿಎಫ್ನ ಆಂಡರ್ಸನ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಸಬ್ ಇನ್ಸ್ಪೆಕ್ಟರ್ ಪಾಷಾ ಮತ್ತು ಇನ್ಸ್ಪೆಕ್ಟರ್ ಲಕ್ಷ್ಮಯ್ಯ ಅವರು ಫರೂಕ್ ವಿರುದ್ಧದ ಮೂರು ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಂಗಿ ಅವರಿಗೆ ಸಹಕರಿಸಿದ್ದರು. ವಿಚಾರಣೆ ನಡೆಸಿದ ನಂತರ ಕೇಂದ್ರ ವಲಯದ ಐಜಿಪಿ ಕಮಲ್ ಪಂಥ್ ಈ ಕ್ರಮ ತೆಗೆದುಕೊಂಡಿದ್ದಾರೆ.
ಆಂಡರ್ಸನ್ ಠಾಣೆಯಲ್ಲಿ ಬಿ ರಿಪೋರ್ಟ್ ಹಾಕಿಸುವುದಾಗಿ ಹೇಳಿ 5 ಲಕ್ಷ ರು. ಲಂಚ ಇಸಿದುಕೊಳ್ಳುವಾಗ ಸಂಪಂಗಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಸಂಪಂಗಿಯವರು 50 ಸಾವಿರ ರು. ನಗದು ಮತ್ತು 45 ಸಾವಿರ ರು. ಚೆಕ್ ಲಂಚರೂಪದಲ್ಲಿ ಸ್ವೀಕರಿಸಿದ್ದನ್ನು ವಿಚಾರಣೆ ವೇಳೆಯಲ್ಲಿ ಒಪ್ಪಿಕೊಂಡಿರುವುದಾಗಿ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರೂಪ್ ಕುಮಾರ್ ದತ್ತ ಹೇಳಿದ್ದಾರೆ.
ಎದೆನೋವಿಲ್ಲ : ಬಂಧನದ ನಂತರ ಎದೆನೋವಿನ ಕಾರಣವೊಡ್ಡಿ ಜಯದೇವ ಆಸ್ಪತ್ರೆ ಸೇರಿದ್ದ ಸಂಪಂಗಿ ಅವರಿಗೆ ಯಾವುದೇ ರೀತಿಯ ಹೃದಯಬೇನೆ ಇಲ್ಲ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ. ಇಂದು ಅವರನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದ ಹೊತ್ತಿನಲ್ಲೇ ಸಂಪಂಗಿ ಹೊಸರಾಗ ಎಳೆದಿದ್ದಾರೆ. ತಲೆನೋವು, ಮೈಕೈನೋವು ಎಂದು ಆರೋಪಿಸಿದ್ದಾರೆ. ಇದರಿಂದಾಗಿ ಹೆಚ್ಚಿನ ತಪಾಸಣೆಗಾಗಿ ಅವರನ್ನು ನಿಮ್ಹಾನ್ಸ್ ಗೆ ಕರೆದೊಯ್ಯುವ ಸಾಧ್ಯತೆಯಿದೆ.
ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರಾಗದ ಕಾರಣ ಸಂಪಂಗಿ ಅವರಿ ಹೆಚ್ಚುವರಿ ನ್ಯಾಯಾಧೀಶ ಆರ್ಎಂ ಶೆಟ್ಟರ್ ಅವರು ಜಾಮೀನು ನಿರಾಕರಿಸಿ ಫೆಬ್ರವರಿ 3ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ಸಂಪಂಗಿ ಜಯದೇವ ಆಸ್ಪತ್ರೆಗೆ ದಾಖಲು
ಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications