ನೊಂದವರಿಗೆ ನೆರವು: ನೂತನ ಡಿಜಿಐಜಿಪಿ ಅಜಯ್
ಬೆಂಗಳೂರು, ಫೆ.1: ನೊಂದವರಿಗೆ ನೆರವು ಎನ್ನುವುದೇ ನಮ್ಮ ಧ್ಯೇಯವಾಕ್ಯ. ನಮ್ಮ ಎಲ್ಲಾ ವೃತ್ತಿಪರ ಚಟುವಟಿಕೆಗಳಿಗೆ ಇದೇ ಮಾನದಂಡ. ಯಾರು ಕಾನೂನು ಭಂಗವುಂಟುಮಾಡುತ್ತಾರೋ, ಅಪರಾಧವೆಸಗುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಪ್ರಭಾವವನ್ನು ಬಳಸಿಕೊಂಡು ಅಪರಾಧಿಗಳು ಕಾನೂನಿನ ಹಿಡಿತದಿಂದ ಪಾರಾಗಲು ಸಾಧ್ಯವಾಗಬಾರದು. ಮತ್ತೊಂದೆಡೆ ಸಮಾಜಘಾತುಕ ಚಟುವಟಿಕೆಗಳಿಗೆ ಬಲಿಯಾದವರಿಗೆ ಅತ್ಯಂತ ಸಹಾನುಭೂತಿಯಿಂದ ನಿಶ್ಚಯವಾಗಿ ಸಹಾಯ ಮಾಡುತ್ತೇವೆ ಎಂದು ಡಾ.ಅಜಯ್ಕುಮಾರ್ ಸಿಂಗ್ ಅವರು ತಿಳಿಸಿದರು.
ಅವರು ರಾಜ್ಯದ ನೂತನ ಡಿಜಿ ಮತ್ತು ಐಜಿಪಿ ಆಗಿ ಅಧಿಕಾರ ಸ್ವೀಕರಿಸಿದನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜನ-ಪರ ಪೊಲೀಸ್ ಆಗಲು ಶ್ರಮಿಸುತ್ತೇವೆ ಜನತೆಯೊಂದಿಗೆ ಹೆಚ್ಚು ಸಂಬಂಧ ಇಟ್ಟುಕೊಂಡು ಕೆಲಸ ಮಾಡುತ್ತೇವೆ. ಸಹೋದ್ಯೋಗಿಗಳ ಜೊತೆಗೆ ಚರ್ಚಿಸಿ ಕೆಲವು ಹೊಸ ಕಾರ್ಯಕ್ರಮಗಳ ಮೂಲಕ ಇದನ್ನು ಸಾಧಿಸುತ್ತೇವೆ ಎಂದು ತಿಳಿಸಿದರು.
ಪೊಲೀಸ್ ಕಾರ್ಯಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆ, ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧ ತಡೆ ಮತ್ತು ಪತ್ತೆಹಚ್ಚಲು ಪರಿಣಾಮಕಾರಿ ಹಾಗೂ ಹೊಸ ರೀತಿಯ ಕ್ರಮಗಳು, ಭಯೋತ್ಪಾದನೆಯನ್ನು ಹೇಗೆ ತಡೆಗಟ್ಟಬಹುದು, ತನಿಖೆಯಲ್ಲಿ ವೈಜ್ಞಾನಿಕ ಉಪಕರಣ ಬಳಕೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರ ಕಲ್ಯಾಣ ಕ್ರಮಗಳು ಎಂಬ ವಿಷಯಗಳ ಬಗ್ಗೆ ಅಧ್ಯಯನ ನಡೆಸಿ ಸಲಹೆ ಸೂಚನೆಗಳನ್ನು ನೀಡಲು ಅಧಿಕಾರಿಗಳ ತಂಡಗಳನ್ನು ರಚಿಸಲಾಗುವುದೆಂದು ನುಡಿದರು.
ಪೊಲೀಸ್ ಕೆಲಸಕ್ಕೆ ಸಂಬಂಧಿಸಿದಂತೆ ಪಿ.ಸಿ., ಹೆಚ್.ಸಿ., ಪಿ.ಸಿ.ಐ. ಮತ್ತು ಎ.ಎಸ್.ಐ ಗಳಿಗೆ ಪ್ರತಿ ಜಿಲ್ಲೆಗಳಲ್ಲಿ ಹಾಗೂ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ, ಪ್ರತಿ ಘಟಕದಲ್ಲೂ ಉತ್ತಮವಾದ ಮೂರು ಪ್ರಬಂಧಗಳಿಗೆ ಬಹುಮಾನ ನೀಡಲಾಗುವುದು. ಜೊತೆಗೆ ಪ್ರತಿ ವರ್ಷ ಉತ್ತಮ ಪತ್ತೆಕಾರ್ಯ, ಅಪರಾಧಕ್ಕೆ ಸಂಬಂಧಿಸಿದ ಮಾಲು ವಶಪಡಿಸಿಕೊಳ್ಳುವಿಕೆಯಲ್ಲಿ ಉತ್ತಮ ಕೆಲಸ ಮತ್ತು ವಶಪಡಿಸಿಕೊಳ್ಳಲಾದ ಮಾಲುಗಳನ್ನು ಫಿರ್ಯಾದುದಾರರಿಗೆ ಹಿಂತಿರುಗುವಿಕೆ ಕಾರ್ಯದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ವಾರ್ಷಿಕ ಕ್ರೀಡಾಕೂಟದ ಸಮಯದಲ್ಲಿ ಬಹುಮಾನ ನೀಡಲಾಗುವುದು. ಹೊಸ ರೀತಿಯ (Innovative) ಹಾಗೂ ಯಶಸ್ವಿ ಕ್ರಮಗಳು/ ಕಾರ್ಯಯೋಜನೆಗಳಿಗೂ ಪ್ರತಿ ವರ್ಷ ಬಹುಮಾನಗಳು ನೀಡಲಾಗುವುದು ಎಂದು ಡಿಜಿ ಮತ್ತು ಐಜಿಪಿ ಅವರು ಹೇಳಿದರು.
'ಅಧಿಕಾರಯುತ ರೀತಿ' ಯಿಂದ 'ಜಬಾಬ್ದಾರಿಯುತ ನೀತಿ'ಗೆ ನಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಲು ನಾವೆಲ್ಲರೂ ಪ್ರಯತ್ನಿಸುತ್ತೇವೆ ಎಂದ ಅವರು ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಜನತೆಗೆ ಮಾಹಿತಿಯನ್ನು ಒದಗಿಸಲು ಜಿಲ್ಲೆ, ವಲಯ ಮತ್ತು ನಗರ ಪೊಲೀಸ್ ಆಯುಕ್ತರ ಮಟ್ಟದಲ್ಲಿ ಅಪರಾಧ, ಕಾನೂನು ಸುವ್ಯವ್ಯಸ್ಥೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ನಿಯಮಿತವಾಗಿ ಪತ್ರಿಕಾ ಸಂದರ್ಶನವನ್ನು ನಡೆಸಲಾಗುವುದು, ವಶಪಡಿಸಿಕೊಂಡ ಮಾಲುಗಳನ್ನು ಆದಷ್ಟು ಶೀಘ್ರವಾಗಿ ಫಿರ್ಯಾದುದಾರರಿಗೆ ಹಿಂತಿರುಗಿಸುವ ಸಲುವಾಗಿ ತ್ರೈಮಾಸಿಕ ಪ್ರಾಪರ್ಟಿ ಪೆರೇಡ್ ಅನ್ನು ಇಲಾಖೆಯ ಎಲ್ಲಾ ಜಿಲ್ಲಾ ಘಟಕಗಳಲ್ಲಿ ಹಾಗೂ ಪೊಲೀಸ್ ಆಯುಕ್ತರ ಕಛೇರಿಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ಡಿಜಿ ಮತ್ತು ಐಜಿಪಿಯಾಗಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ಆರ್. ಶ್ರೀಕುಮಾರ್ ಅವರು ಕರ್ನಾಟಕ ಜನತೆಗೆ ಕೃತಜ್ಞತೆ ಅರ್ಪಿಸಿ ತಮ್ಮ ಅಧಿಕಾರಾವಧಿಯಲ್ಲಿ ಪೊಲೀಸ್ ಇಲಾಖೆ ಆಧುನೀಕರಣಗೊಳಿಸುವತ್ತ ಕ್ರಮ ಕೈಗೊಳ್ಳಲಾಗಿದೆ. ಕೆಲವು ಅಪೂರ್ಣವಾಗಿರುವ ಕ್ರಮಗಳನ್ನು ನೂತನ ಡಿಜಿ ಮತ್ತು ಐ.ಜಿಪಿ ಅವರು ಪೂರ್ಣಗೊಳಿಸುವರೆಂಬ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.
ಕಿರು ಪರಿಚಯ: ಉತ್ತರಪ್ರದೇಶದ ಸಿರ್ಸಾಗಂಜ್ ನಲ್ಲಿ ಜ. 6, 1951 ರಲ್ಲಿ ಅಜಯಕುಮಾರ್ ಸಿಂಗ್ ಜನನ.ಆರ್ಥಿಕ ಅಪರಾಧ ವಿಭಾಗದ ಡಿಜಿಪಿ, ಹೋಂ ಗಾರ್ಡ್ ಡಿಜಿಪಿ, ನಗರ ಪೊಲೀಸ್ ಆಯುಕ್ತ, ಟ್ರಾಫಿಕ್ ಮತ್ತು ಸುರಕ್ಷತೆ ವಿಭಾಗದ ಜಂಟಿ ಆಯುಕ್ತ, ಗುಪ್ತಚರ ವಿಭಾಗ ಹಾಗೂ ರೈಲ್ವೇಯಲ್ಲಿ ಡಿಐಜಿಪಿ, ಮಂಡ್ಯ, ಶಿವಮೊಗ್ಗದಲ್ಲಿ ಎಪಿ ಹಾಗೂ ಗುಲ್ಭರ್ಗಾದಲ್ಲಿ ಹೆಚ್ಚುವರಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹುಬ್ಬಳ್ಳಿ ಉಗ್ರರ ದಾಳಿ ಹಾಗೂ ಬೆಂಗಳೂರಿನ ಐಐಎಸ್ಸಿ ದಾಳಿ ಪ್ರಕರಣದ ತನಿಖಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಸಾಹಿತ್ಯ, ಸಂಗೀತ, ನಾಟಕದಲ್ಲಿ ಆಸಕ್ತಿ, ಬಿಡುವಿದ್ದಾಗ ನಗರದ ರವೀಂದ್ರ ಕಲಾಕ್ಷೇತ್ರ, ರಂಗಶಂಕರಕ್ಕೆ ಭೇಟಿ ನೀಡಿ, ನಾಟಕಗಳನ್ನು ನೋಡಿ ಆನಂದಿಸುತ್ತಾರೆ. ಪೊಲೀಸ್ ಪಡೆಯಲ್ಲಿ ಚಾಣಕ್ಷ ಅಧಿಕಾರಿ ಎಂದು ಹೆಸರುವಾಸಿ.
(ದಟ್ಸ್ ಕನ್ನಡವಾರ್ತೆ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications