Get Updates
Get notified of breaking news, exclusive insights, and must-see stories!

ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ: ಬಚ್ಚೇಗೌಡ

ಗುಲಬರ್ಗಾ, ಫೆ.1:ರಾಜ್ಯ ಸರ್ಕಾರವು ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ ಕಲ್ಪಿಸಲಿದೆ ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಅವರು ಹೇಳಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏರ್ಪಡಿಸಲಾದ ಉದ್ಯೋಗ ಮೇಳ ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ತರಬೇತಿ ಯುವಕರಿಗೆ ಬಹಳ ಮುಖ್ಯ. ಬೆಂಗಳೂರು, ಮೈಸೂರು ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ಒಟ್ಟು 41 ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 10,110 ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಸುಮಾರು 10 ಸಾವಿರ ಜನರಿಗೆ ತರಬೇತಿ ನೀಡಲಾಗುತ್ತಿದೆ. ಸುಮಾರು 13ಸಾವಿರ ಮಂದಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು.ಅಭ್ಯರ್ಥಿಗಳನ್ನು ನೋಂದಾವಣೆ ಮಾಡಿ, ಅವರ ಸಾಮರ್ಥ್ಯವನ್ನು ಪರೀಕ್ಷಿಸಿ ಉದ್ಯೋಗ ಕಲ್ಪಿಸಲಾಗುತ್ತದೆ. ನೋಂದಾವಣೆಯಾದ ಅಭ್ಯರ್ಥಿಗಳಿಗೆ ಪ್ಲೇಸ್‌ಮೆಂಟ್ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ತರಬೇತಿಗಾಗಿ 50 ಕೋಟಿ ರು. ಕೊಟ್ಟಿದ್ದಾರೆ. ರಾಜ್ಯದಲ್ಲಿ 9 ಸಾವಿರ ವಿದ್ಯಾರ್ಥಿಗಳು ಐಟಿಐ ಮಾಡುತ್ತಿದ್ದಾರೆ. ಇವರ ಅವಶ್ಯಕತೆ ರಾಜ್ಯಕ್ಕೆ ಇದೆ. ಇದಲ್ಲದೆ, ಹಿಂದುಳಿದ ಭಾಗದ ಅಭ್ಯರ್ಥಿಗಳಿಗೆ 260 ವಿಷಯಗಳಲ್ಲಿ ಕೌಶಲ್ಯಾಭಿವೃದ್ಧಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಶಶೀಲ್ ಜಿ. ನಮೋಶಿ ಅವರು, ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಸಮಿತಿಯು 100 ಕೋಟಿ ರು. ಕೊಡಲು ಸಿದ್ಧವಿದೆ. ಕೌಶಲ್ಯಾಭಿವೃದ್ಧಿ ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ಪ್ರಸ್ತಾವನೆ ಕೊಡಿ ಎಂದು ಕೇಳಿರುವುದಾಗಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಕೌಶಲ್ಯ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಷ್ಣುಕಾಂತ್ ಚಾಟ್‌ಪಲ್ಲಿ ಅವರು, 85 ಸಂಸ್ಥೆಗಳು ಉದ್ಯೋಗ ನೀಡಲು ನೋಂದಾಯಿಸಿಕೊಂಡಿವೆ. ಉದ್ಯೋಗ ಮೇಳದಲ್ಲಿ ಒಟ್ಟು 12 ಕೌಂಟರ್‌ಗಳನ್ನು ತೆರೆಯಲಾಗಿದ್ದು, ಅಂಗವಿಕಲರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ ಎಂದರು.

ಪಶು ಸಂಗೋಪನಾ ಸಚಿವ ರೇವೂನಾಯಕ್ ಬೆಳಮಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ, ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಡಾ. ಶೈಲಜಾ ಶರಣಭೂಪಾಲರೆಡ್ಡಿ, ಉಪಾಧ್ಯಕ್ಷ ಸುರೇಶ್ ಸಜ್ಜನ್, ಉದ್ಯಮಿ ಎಸ್.ಎಸ್.ಪಾಟೀಲ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಿ.ಆರ್.ಚಿಕ್ಕಮಠ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ರಮೇಶ್ ಬಿ.ಝಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್, ಗುಲಬರ್ಗಾ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಮರನಾಥ ಪಾಟೀಲ್ ಮುಂತಾದವರು ಹಾಜರಿದ್ದರು.
(ದಟ್ಸ್ ಕನ್ನಡ ವಾರ್ತೆ)
ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+