ಬಿಜೆಪಿಗೆ ಜನತೆಯಿಂದ ತಕ್ಕ ಪಾಠ : ಮುತಾಲಿಕ್
ಮಡಿಕೇರಿ, ಫೆ. 1: ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ, ಈಗ ಮಿತಿ ಮೀರಿ ವರ್ತಿಸುತ್ತಿದೆ. ಹಿಂದೂ ಸಂಘಟನೆಗಳ ಮೇಲೆ ಪ್ರಹಾರ ಮಾಡುತ್ತಿದೆ. ಇದಕ್ಕೆ ತಕ್ಕ ಉತ್ತರ ದೊರೆಯಲಿದೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಬಂಧನದಲ್ಲಿರುವ ಮುತಾಲಿಕ್ ಟಿವಿ 9 ವಾರ್ತಾ ವಾಹಿನಿಯೊಂದಿಗೆ ಮಾತನಾಡುತ್ತಾ, ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಪಬ್ ದಾಳಿಯನ್ನು ವಿನಾಕಾರಣ ರಾಜಕೀಯ ಪಕ್ಷಗಳು ಎಳೆದಾಡುತ್ತಿವೆ. ಮಹಿಳಾ ಆಯೋಗದ ಸದಸ್ಯರು ಇತ್ತೀಚೆಗೆ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪಬ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮಗೆ ಅಷ್ಟು ಸಾಕು, ಕುಡಿತ, ಮೋಜು, ಮಹಿಳೆಯನ್ನು ಕೀಳಾಗಿ ಚಿತ್ರಿಸುವ ಸಮಾಜ ಘಾತುಕರ ವಿರುದ್ಧ ನಮ್ಮ ಹೋರಾಟ ಅವಿರತವಾಗಿ ಸಾಗಲಿದೆ ಎಂದರು.
ಆದರೆ, ಮಂಗಳೂರಿನ ಅಮ್ನೇಷಿಯಾ ಪಬ್ ಮೇಲೆ ನಿಮ್ಮ ಸಂಘಟನೆಯ ಕಾರ್ಯಕರ್ತರು ಮಹಿಳೆಯರ ಮೇಲೆ ಮಾಡಿದ ಹಲ್ಲೆಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿರಾ ಎಂಬ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಮುತಾಲಿಕ್, ನಾನು ಎಂದೂ ಮಹಿಳೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡಿಲ್ಲ. ಪಬ್ ಸಂಸ್ಕೃತಿಯ ಮೇಲಿನ ಪ್ರತಿಭಟನೆಯನ್ನು ಸಮರ್ಥಿಸಿಕೊಂಡಿದ್ದೇನೆ . ಒಂದು ವಿಷ್ಯ ನಿಮ್ಮ ಮಾಧ್ಯಮದವರಿಗೆ ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ.
"ನಮ್ಮ ಕಾರ್ಯಕರ್ತರು ಅಂದು ಮಾಡಿದ ದಾಳಿಗೆ ನಾನು ಕ್ಷಮೆ ಕೋರಿದ್ದೇನೆ. ಆದರೆ, ಮಹಿಳೆಯರು ಕುಡಿತ, ಮೋಜಿನ ಹೆಸರಿನಲ್ಲಿ ಪಬ್ ಸಂಸ್ಕೃತಿ ಬೆಳೆಸುವುದು ಎಷ್ಟು ಸರಿ. ಈ ಬಗ್ಗೆ ಯಾಕೆ ನೀವ್ಯಾರು ಬೆಳಕು ಚೆಲ್ಲುತ್ತಿಲ್ಲ"ಎಂದು ಗುಡುಗಿದರು.
ಬಿಜೆಪಿ ಸರ್ಕಾರ ಹಿಂದೂತ್ವವನ್ನು ಮರೆತಿದ್ದರೆ ಅದಕ್ಕೆ ಪ್ರತಿಫಲವನ್ನು ಅನುಭವಿಸಲಿದ್ದಾರೆ, ನಮ್ಮ ಹಿಂದೆ 10 ಕೋಟಿ ಬೆಂಬಲಿಗರಿದ್ದಾರೆ. ಹೆಮ್ಮೆ ಪಡುವಂಥ ಸಂಸ್ಕೃತಿಯಿದೆ ನಾವು ಯಾವುದಕ್ಕೂ ಹೆದರಬೇಕಾಗಿಲ್ಲ ಎಂದು ಮಾತು ಮುಕ್ತಾಯಗೊಳಿಸಿದರು. ಮುತಾಲಿಕ್ ಅವರ ವಿರುದ್ಧ ಸುಮಾರು 57ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದೇಶದಾದ್ಯಂತ ದಾಖಲಾಗಿವೆ.
(ದಟ್ಸ್ ಕನ್ನಡವಾರ್ತೆ)
ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications