ಶಿವಕುಮಾರ ಸ್ವಾಮಿಗಳ ಜನ್ಮಶತಮಾನೋತ್ಸವ

ತುಮಕೂರು, ಫೆ.2 : ರಾಷ್ಟ್ರಪತಿ ಪ್ರತಿಭಾ ಪಾಟೀಲರನ್ನು ಭರಮಾಡಿಕೊಳ್ಳಲು ತುಮಕೂರು ಸಕಲ ರೀತಿಯಲ್ಲೂ ಸಿಂಗಾರಗೊಂಡಿದೆ. ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ಜನ್ಮ ಶತಮಾನೋತ್ಸವ ಉದ್ಘಾಟಿಸಲು ಸೋಮವಾರ ಆಗಮಿಸುತ್ತಿರುವ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಲು ತುಮಕೂರು ಜಿಲ್ಲಾಡಳಿತ ಸಿದ್ಧಗೊಂಡಿದೆ.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮ ಶತಮಾನೋತ್ಸವ ಸಮಾರಂಭದ ಮೂಲಕ ಇತಿಹಾಸ ಸೃಷ್ಟಿಸಲು ಅಪಾರ ಭಕ್ತ ಸಮೂಹ ಸಜ್ಜಾಗಿದೆ. 3 ದಿನಗಳ ಕಾಲ ನಡೆಯುವ ಸಮಾರಂಭದಲ್ಲಿ 10 ರಿಂದ 12 ಲಕ್ಷ ಭಕ್ತರು ಪಾಲ್ಗೊಳ್ಳಲಿದ್ದಾರೆ. ಭಕ್ತರಿಗಾರಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಠದ ಆವರಣದಲ್ಲಿ ಕಲ್ಪಿಸಲಾಗಿದೆ. ಒಟ್ಟು 20 ಕಡೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ. 30 ಸಾವಿರ ಮಂದಿ ಒಮ್ಮೆಲೆ ಪ್ರಸಾದ ಸ್ವೀಕರಿಸಬಹುದಾಗಿದೆ.

ಬೆಳಗ್ಗೆ 7 ರಿಂದ 10.30ರ ತನಕ ಉಪಹಾರ, ಕಾಫಿ, ಚಹ ವ್ಯವಸ್ಥೆ ಏರ್ಪಡಿಸಲಾಗಿದೆ. ಬೆಳಗ್ಗೆ 11ರಿಂದ ರಾತ್ರಿ 11ರತನಕ ಊಟದ ವ್ಯವಸ್ಥೆಯನ್ನು ಕಲ್ಪಿಸಿಲಾಗಿದೆ. ಉದ್ಘಾಟನಾ ಸಮಾರಂಭ ಡಿಡಿ1 ರಲ್ಲಿ ನೇರ ಪ್ರಸಾರಗೊಳ್ಳಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+