ಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ

ಬಡಗುತಿಟ್ಟಿನ ಇಡುಗುಂಜಿ ಮಹಾಗಣಪತಿ ಯಕ್ಷಗಾನ ಮಂಡಲಿಯ ಶಂಭು ಹೆಗ್ಗಡೆ ಅದ್ಭುತ ಕಲಾವಿದರಾಗಿದ್ದರು. ಖ್ಯಾತ ಯಕ್ಷಗಾನ ಕಲಾವಿದರಾಗಿದ್ದ ಇವರ ತಂದೆ ಕೆರೆಮನೆ ಶಿವರಾಮ ಹೆಗಡೆ ಅವರಂತೆ ಯಕ್ಷ ಕಲೆಗೆ ಶಂಭು ಹೆಗಡೆ ಹೆಸರು ತಂದು ಕೊಟ್ಟವರು. ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕೆರೆಮನೆಯ ಹವ್ಯಕ ಬ್ರಾಹ್ಮಣರಾದ ಶಿವರಾಮ ಹೆಗಡೆ ಅವರು ಮಹಾಗಣಪತಿ ಯಕ್ಷಗಾನ ಮಂಡಲಿಯನ್ನು 1934 ರಲ್ಲಿ ಕಟ್ಟಿ ಬೆಳೆಸಿದವರು. ಅಕ್ಟೋಬರ್ 6,1938 ರಲ್ಲಿ ಶಂಭುಹೆಗಡೆ ಅವರು ಜನಿಸಿದ್ದರು.
ತಂದೆಯ ಹಾದಿಯನ್ನೇ ಹಿಡಿದ ಶಂಭು ಹೆಗಡೆ ಅವರು ಸಾಂಪ್ರದಾಯಿಕ ಶೈಲಿಗೆ ಆಧುನಿಕತೆಯ ಸ್ಪರ್ಶ ನೀಡಿದರು. ಯಕ್ಷ ಕಲೆಯತ್ತ ಯುವಜನರನ್ನು ಕರೆ ತಂದರು.ದೇಶದ ಹಲವೆಡೆ ಯಕ್ಷಗಾನದ ಪ್ರಚಾರಕ್ಕೆ ಟೊಂಕ ಕಟ್ಟಿ ನಿಂತರು. ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಗಳಿಸಿದರು. ರಂಗಾಯಣದ 'ರಂಗ ಸಮಾಜ'ದ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಸುನಿಲ್ ಕುಮಾರ್ ದೇಸಾಯಿ ನಿರ್ದೇಶನದ ರಾಜ್ಯ ಪ್ರಶಸ್ತಿ ವಿಜೇತ 'ಪರ್ವ' ಚಿತ್ರದಲ್ಲಿ ಅಭಿನಯಿಸಿದ್ದರು.
ಬಲರಾಮ, ಜರಾಸಂಧ, ಕಾರ್ತವೀರ್ಯಾರ್ಜುನ ಹಾಗೂ ದುರ್ಯೋಧನ ಪಾತ್ರಗಳಲ್ಲಿ ತಾವೇ ತಾವಾಗಿ ರಂಗದ ಮೇಲೆ ಮಿಂಚಿದ್ದರು. ಇವರ ಮಗ ಶಿವಾನಂದ ಹೆಗಡೆ ಹಾಗೂ ಇತ್ತೀಚೆಗೆ ರಂಗ ಪ್ರವೇಶ ಮಾಡಿದ ಮೊಮ್ಮಗ ಶ್ರೀಧರ ಹೆಗಡೆ ಅವರ ಮೇಲೆ ಕೆರೆಮನೆ ಪರಂಪರೆಯನ್ನು ಉಳಿಸಿ, ಬೆಳಸಿಕೊಂಡು ಹೋಗುವ ಜವಾಬ್ದಾರಿಯನ್ನು ಶಂಭು ಹೆಗಡೆ ಅವರು ಬಿಟ್ಟು ಹೋಗಿದ್ದಾರೆ. ಅಗಲಿದ ರಂಗಚೇತನಕ್ಕೆ ನಾಡಿನ ಅನೇಕ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications