ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ

gurupadappa nagamarapalli
ಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಮೂರು ತಿಂಗಳ ಹಿಂದೆಯೇ ಬಿಜೆಪಿ ಸೇರಲು ವೇದಿಕೆ ಸಿದ್ದಪಡಿಸಿಕೊಂಡಿರುವ ನಾಗಮಾರಪಲ್ಲಿ ಇಂದು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲದ ನಾಗಮಾರಪಲ್ಲಿ ಅವರು, ಮುಂದಿನ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷ ಬೀದರ್ ಮತ್ತು ಗುಲ್ಬರ್ಗಾ ಕ್ಷೇತ್ರಗಳಿಗೆ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪ್ರಬಲ ಅಭ್ಯರ್ಥಿಗಳ ಹುಡುಕಾಟದ್ದು, ಗುರುಪಾದಪ್ಪ ನಾಗಮಾರಪಲ್ಲಿ ಅವರನ್ನು ಬೀದರ್ ನಿಂದ ಅಖಾಡಕ್ಕಿಳಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದೇವೇಗೌಡರ ಕಡುವೈರಿ ಎಂದೇ ಬಿಂಬಿತರಾಗಿರುವ ಗಂಡಸಿ ಕ್ಷೇತ್ರದ ಮಾಜಿ ಶಾಸಕ ಬಿ ಶಿವರಾಂ ಅವರಿಗೂ ಬಿಜೆಪಿ ಗಾಳಿ ಹಾಕಿರುವ ಸುದ್ದಿ ದಟ್ಟವಾಗಿದೆ. ಶೀಘ್ರದಲ್ಲಿ ಅವರೂ ಕೂಡಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯ ವಿಶ್ವಸನೀಯ ಮೂಲಗಳು ತಿಳಿಸಿವೆ. ಶಿವರಾಂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಹಾಸನ ಲೋಕಸಭೆ ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಬಿಜೆಪಿಯಿಂದ ಅಖಾಡಕ್ಕಿಳಿಸಲು ತಂತ್ರ ರೂಪಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉಗ್ರರ ವಿರೋಧಿ ಅಭಿಯಾನಕ್ಕೆ ಕೈ ಅಡ್ಡಿ, ಲಾಠಿ ಚಾರ್ಜ್
ಉಡುಪಿ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+