ಉಗ್ರ ಅಜ್ಮಲ್ ಅಮೀರ್ ಕಸಬ್ ಸತ್ತಿಲ್ಲ
ಮುಂಬೈ, ಫೆ. 4 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿ ಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮಾಡಿರುವ ಸುಳ್ಳು ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುಂಬೈ ಅಪರಾಧ ಇಲಾಖೆ ಉಗ್ರ ಕಸಬ್ ಕುಳಿತಿರುವ ಚಿತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ.
ಉಗ್ರ ಅಜ್ಮಲ್ ಅಮೀರ್ ಕಸಬ್ ಫೈಬರ್ ಕುರ್ಚಿಯ ಮೇಲೆ ಕುಳಿತಿದ್ದು, ಬಲಗೈಗೆ ಬ್ಯಾಂಡೇಜ್ ಮಾಡಲಾಗಿರುವ ಚಿತ್ರವನ್ನು ಮುಂಬೈ ಕ್ರೈಮ್ ಪೊಲೀಸರು ಎಲ್ಲ ಮಾಧ್ಯಮಗಳಿಗೆ ನೀಡಿದ್ದಾರೆ. ಉಗ್ರ ಕಸಬ್ ನಿಗೆ ಯಾವುದೇ ತೊಂದರೆ ಇಲ್ಲ. ಆತನ ಆರೋಗ್ಯ ಕೂಡ ಉತ್ತಮವಾಗಿದೆ. ಪಾಕಿಸ್ತಾನದ ಮಾದ್ಯಮಗಳು ಮಾಡಿರುವ ವರದಿ ಶುದ್ಧ ಸುಳ್ಳು. ಸತ್ಯಕ್ಕೆ ದೂರವಾದ ಸಂಗತಿ ಎಂದು ಮುಂಬೈ ಕ್ರೈಮ್ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಗೃಹ ಸಚಿವ ಜಯಂತ್ ಪಾಟೀಲ್ ಕೂಡ ಪಾಕಿಸ್ತಾನದ ಮಾಧ್ಯಮಗಳು ಮಾಡಿರುವ ವರದಿಯನ್ನು ನಿರಾಕರಿಸಿದ್ದರು. ಕಸಬ್ ಪೊಲೀಸ್ ವಶದಲ್ಲಿದ್ದು, ಆರೋಗ್ಯವಾಗಿದ್ದಾನೆ ಎಂದು ಸ್ಪಷ್ಟಪಡಿಸಿದ್ದರು. ಕಸಬ್ ಸತ್ತಿದ್ದಾನೆ ಎಂದು ಪಾಕಿಸ್ತಾನಕ್ಕೆ ಸಂಶಯ ಉಂಟಾದಲ್ಲಿ ತನ್ನ ರಾಯಭಾರಿ ಅಧಿಕಾರಿಗಳ ಪರಿಶೀಲನೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಜನವರಿ 30 ರಂದೇ ಅವರು ಹೇಳಿಕೆ ನೀಡಿದ್ದರು.
ಕಳೆದ ವರ್ಷ ನವೆಂಬರ್ 26 ರಂದು ಪಾಕ್ ಬೆಂಬಲಿತ ಉಗ್ರರು ನಡೆಸಿದ ಭಯೋತ್ಪಾದನೆಯಲ್ಲಿ ಛತ್ರಪತಿ ಶಿವಾಜಿ ಬಸ್ ನಿಲ್ದಾಣದ ಬಳಿ ಪೊಲೀಸರ ಕೈಗೆ ಕಸಬ್ ಸಿಕ್ಕಿಬಿದ್ದದ್ದ. ಈತನ ಸಹಚರ ಇಸ್ಮಾಯಿಲ್ ನನ್ನು ಪೊಲೀಸರು ಹತ್ಯ ಮಾಡಿದ್ದರು. ಘಟನೆಯಲ್ಲಿ 180ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. 300 ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications