ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ ಆರಂಭ
ಹೈದರಾಬಾದ್, ಫೆ. 4 : ಸತ್ಯಂ ಕಂಪನಿಯ ಮಾಜಿ ಮುಖ್ಯಸ್ಥ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರ ವಿಚಾರಣೆಯನ್ನು ಸೆಬಿ (ಭಾರತೀಯ ಮಾರುಕಟ್ಟೆ ಹಾಗೂ ಭದ್ರತಾ ಮಂಡಳಿ) ಇಂದು ಆರಂಭಿಸಿದೆ. 7800 ಕೋಟಿ ರುಪಾಯಿಗಳ ಅವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ರಾಮಲಿಂಗರಾಜು ಅವರ ವಿಚಾರಣೆ ನಡೆಸಲು ಮಂಗಳವಾರ ಸುಪ್ರಿಂಕೋರ್ಟ್ ಅನುಮತಿ ನೀಡಿತ್ತು.
ಹೈದರಾಬಾದ್ ಪೊಲೀಸರ ಸಮ್ಮುಖದಲ್ಲಿ ಸೆಬಿ ಅಧಿಕಾರಿಗಳು ರಾಮಲಿಂಗರಾಜು ಅವರನ್ನು ವಿಚಾರಣೆ ನಡೆಸಬೇಕಾಗಿದ್ದು, ಸುಮಾರು 7800 ಕೋಟಿ ರುಪಾಯಿಗಳ ಅವ್ಯವಹಾರದ ಬಗ್ಗೆ ಸಮಗ್ರ ವಿಚಾರಣೆ ನಡೆಯಲಿದೆ. ಸೆಬಿ ಅಧಿಕಾರಿಗಳು ಮೂರು ದಿನಗಳ ಕಾಲ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರನ್ನು ವಿಚಾರಣೆ ನಡೆಸಲು ಸುಪ್ರಿಕೋರ್ಟ್ ಅನುಮತಿ ನೀಡಿದೆ.
ಸತ್ಯಂ ಕಂಪನಿಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ರಾಮಲಿಂಗರಾಜು ಅವರನ್ನು ತಮ್ಮ ವಶಕ್ಕೆ ನೀಡಬೇಕೆಂದು ಸ್ಥಳೀಯ ಸೆಬಿ ಮನವಿ ಮಾಡಿತ್ತು. ಆದರೆ, ಸ್ಥಳೀಯ ನ್ಯಾಯಾಲಯ ಪ್ರಕರಣ ಸೂಕ್ಷ್ಮವಾಗಿದ್ದರಿಂದ ರಾಜು ವಿಚಾರಣೆಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿದ ಸೆಬಿ ಹೈದರಾಬಾದ್ ಹೈಕೋರ್ಟ್ ಮೊರೆ ಹೋಗಿತ್ತು. ಅಲ್ಲಿ ಕೂಡ ಸೆಬಿ ಅಧಿಕಾರಿಗಳಿಗೆ ನಿರಾಶೆ ಉಂಟಾಯಿತು.
ಅಂತಿಮ ಹೋರಾಟ ಎಂಬಂತೆ ಸುಪ್ರಿಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಿ, ರಾಜು ವಿಚಾರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿತ್ತು. ಸೆಬಿ ಮನವಿಯನ್ನು ಪುರಸ್ಕರಿಸಿದ ಸುಪ್ರಿಕೋರ್ಟ್ ನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ಅವರನ್ನು ಒಳಗೊಂಡ ಪೀಠ ರಾಜು ವಿಚಾರಣೆಗೆ ಮಂಗಳವಾರ ಅನುಮತಿ ನೀಡಿತ್ತು.
(ದಟ್ಸ್ ಕನ್ನಡ ವಾರ್ತೆ)
ಹೆಚ್ಚಿನ ಓದಿಗೆ: ರಾಜು ವಿಚಾರಣೆ, ಸೆಬಿ ಅರ್ಜಿ ಪುರಸ್ಕರಿಸಿದ ಕೋರ್ಟ್
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications