ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ ಆರಂಭ
ಹೈದರಾಬಾದ್, ಫೆ. 4 : ಸತ್ಯಂ ಕಂಪನಿಯ ಮಾಜಿ ಮುಖ್ಯಸ್ಥ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರ ವಿಚಾರಣೆಯನ್ನು ಸೆಬಿ (ಭಾರತೀಯ ಮಾರುಕಟ್ಟೆ ಹಾಗೂ ಭದ್ರತಾ ಮಂಡಳಿ) ಇಂದು ಆರಂಭಿಸಿದೆ. 7800 ಕೋಟಿ ರುಪಾಯಿಗಳ ಅವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ರಾಮಲಿಂಗರಾಜು ಅವರ ವಿಚಾರಣೆ ನಡೆಸಲು ಮಂಗಳವಾರ ಸುಪ್ರಿಂಕೋರ್ಟ್ ಅನುಮತಿ ನೀಡಿತ್ತು.
ಹೈದರಾಬಾದ್ ಪೊಲೀಸರ ಸಮ್ಮುಖದಲ್ಲಿ ಸೆಬಿ ಅಧಿಕಾರಿಗಳು ರಾಮಲಿಂಗರಾಜು ಅವರನ್ನು ವಿಚಾರಣೆ ನಡೆಸಬೇಕಾಗಿದ್ದು, ಸುಮಾರು 7800 ಕೋಟಿ ರುಪಾಯಿಗಳ ಅವ್ಯವಹಾರದ ಬಗ್ಗೆ ಸಮಗ್ರ ವಿಚಾರಣೆ ನಡೆಯಲಿದೆ. ಸೆಬಿ ಅಧಿಕಾರಿಗಳು ಮೂರು ದಿನಗಳ ಕಾಲ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರನ್ನು ವಿಚಾರಣೆ ನಡೆಸಲು ಸುಪ್ರಿಕೋರ್ಟ್ ಅನುಮತಿ ನೀಡಿದೆ.
ಸತ್ಯಂ ಕಂಪನಿಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ರಾಮಲಿಂಗರಾಜು ಅವರನ್ನು ತಮ್ಮ ವಶಕ್ಕೆ ನೀಡಬೇಕೆಂದು ಸ್ಥಳೀಯ ಸೆಬಿ ಮನವಿ ಮಾಡಿತ್ತು. ಆದರೆ, ಸ್ಥಳೀಯ ನ್ಯಾಯಾಲಯ ಪ್ರಕರಣ ಸೂಕ್ಷ್ಮವಾಗಿದ್ದರಿಂದ ರಾಜು ವಿಚಾರಣೆಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿದ ಸೆಬಿ ಹೈದರಾಬಾದ್ ಹೈಕೋರ್ಟ್ ಮೊರೆ ಹೋಗಿತ್ತು. ಅಲ್ಲಿ ಕೂಡ ಸೆಬಿ ಅಧಿಕಾರಿಗಳಿಗೆ ನಿರಾಶೆ ಉಂಟಾಯಿತು.
ಅಂತಿಮ ಹೋರಾಟ ಎಂಬಂತೆ ಸುಪ್ರಿಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಿ, ರಾಜು ವಿಚಾರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿತ್ತು. ಸೆಬಿ ಮನವಿಯನ್ನು ಪುರಸ್ಕರಿಸಿದ ಸುಪ್ರಿಕೋರ್ಟ್ ನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ಅವರನ್ನು ಒಳಗೊಂಡ ಪೀಠ ರಾಜು ವಿಚಾರಣೆಗೆ ಮಂಗಳವಾರ ಅನುಮತಿ ನೀಡಿತ್ತು.
(ದಟ್ಸ್ ಕನ್ನಡ ವಾರ್ತೆ)
ಹೆಚ್ಚಿನ ಓದಿಗೆ: ರಾಜು ವಿಚಾರಣೆ, ಸೆಬಿ ಅರ್ಜಿ ಪುರಸ್ಕರಿಸಿದ ಕೋರ್ಟ್
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications