ತುಮಕೂರು ವಿವಿಗೆ ಸಿದ್ದಗಂಗಾ ಶ್ರೀಗಳ ಹೆಸರು:ಸಿಎಂ
ತುಮಕೂರು, ಫೆ. 4 : ತುಮಕೂರು ವಿಶ್ವವಿದ್ಯಾಲಯಕ್ಕೆ ತ್ರಿವಿಧ ದಾಸೋಹಿ, ಆಧ್ಯಾತ್ಮಿಕ ಕ್ಷೇತ್ರದ ಅನರ್ಘ್ಯ ರತ್ನ ಸಿದ್ದಗಂಗಾ ಮಠಾಧೀಶ ಡಾ ಶಿವಕುಮಾರ ಮಹಾಸ್ವಾಮಿಗಳ ಹೆಸರನ್ನಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ತುಮಕೂರಿನಲ್ಲಿ ಏರ್ಪಡಿಸಲಾಗಿರುವ ಸಿದ್ದಗಂಗಾ ಮಠಾಧೀಶ ಶಿವಕುಮಾರ್ ಶ್ರೀಗಳ ಶತದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ತಮ್ಮ ಜೀವಿತಾವಧಿಯನ್ನು ಸಮಾಜದ ಸೇವೆಗಾಗಿ ಮುಡುಪಾಗಿಟ್ಟ ಮಹಾನ್ ಚೇತನದ ಸವಿನೆನಪಿಗಾಗಿ ತುಮಕೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮುಂಬರುವ ಅಧಿವೇಶನ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಅಗತ್ಯಬಿದ್ದರೆ ಕಾನೂನು ತೊಡಕುಗಳಿಗೆ ತಿದ್ದುಪಡಿ ಮಾಡಿ ಶಿವಕುಮಾರ ಶ್ರೀಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದರು.
ಶತದಿನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸಿದ್ದಗಂಗಾ ಶ್ರೀಗಳನ್ನು ಮನಸಾರೆ ಹೊಗಳಿದರು. ಅಧ್ಯಾತ್ಮಿಕ ಕ್ಷೇತ್ರದ ಏಕಮೇವ ರತ್ನ ಎಂದು ಬಣ್ಣಿಸಿದ ಅಡ್ವಾಣಿ, ಶ್ರೀಗಳು ಪ್ರಶಸ್ತಿ ಹಾಗೂ ಗೌರವಗಳಿಗೆ ಮೀರಿದವರು ಎಂದು ಕೊಂಡಾಡಿದರು. ಶ್ರೀಗಳ ಸಾಧನೆಯನ್ನು ಚಿಕ್ಕ ಪುಟ್ಟ ಗೌರವದಿಂದ ಅಳೆಯಲು ಸಾಧ್ಯವಿಲ್ಲ. ಇಡೀ ಮಾನವ ಕುಲದ ಪ್ರತಿನಿಧಿಯಾಗಿ ಸಾರ್ಥಕ ಜೀವನ ನಡೆಸಿದ ಶ್ರೀಗಳಿಗೆ ಕೋಟಿ ನಮನ ಸಲ್ಲಿಸಿದರೂ ಸಾಲದು ಎಂದು ಅಡ್ವಾಣಿ ಪ್ರಶಂಸಿದರು.
(ದಟ್ಸ್ ಕನ್ನಡ ವಾರ್ತೆ)
ಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications