ಉಗ್ರರ ವಿರೋಧಿ ಅಭಿಯಾನಕ್ಕೆ ಕೈ ಅಡ್ಡಿ, ಲಾಠಿ ಚಾರ್ಜ್
ಬೆಂಗಳೂರು, ಫೆ. 4 : ಭಯೋತ್ಪಾದನೆ ಹೋಗಲಾಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಸಂಬಂಧಿಸಿದಂತೆ ನಗರದ ಸೆಂಟ್ರಲ್ ಕಾಲೇಜಿನಲ್ಲಿ ನಡೆಯುತ್ತಿದ್ದ ಸಭೆಗೆ ಅಡ್ಡಿಪಡಿಸಿ ಕಪ್ಪು ಬಾವುಟ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಘಟನೆ ಇಂದು ಮಧ್ಯಾಹ್ನ ಸೆಂಟ್ರಲ್ ಕಾಲೇಜ್ ಆವರಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಭಯೋತ್ಪಾದನೆ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಭಯೋತ್ಪಾದನೆ ವಿರೋಧಿ ಅಭಿಯಾನ ನಡೆಸಬೇಕು ಎಂದು ಆದೇಶಿಸಿತ್ತು. ಈ ಸಂಬಂಧ ಸರ್ಕಾರಿ ಆದೇಶವನ್ನೂ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಎಲ್ಲ ಶಾಲಾ ಕಾಲೇಜುಗಳ ಪ್ರಿನ್ಸಿಪಾಲರು ಹಾಗೂ ಮುಖ್ಯಶಿಕ್ಷಕರ ಸಭೆಯನ್ನು ಸೆಂಟ್ರಲ್ ಕಾಲೇಜಿನಲ್ಲಿ ಕರೆಯಲಾಗಿತ್ತು. ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ಸಿಗರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸತೊಡಗಿದರು. ಪರಿಸ್ಥಿತಿ ಕೈ ಮೀರಿದ್ದರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಜೆಪಿ ಸರ್ಕಾರ ರಾಜ್ಯಾದ್ಯಂತ ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಆಭಿಯಾನದಲ್ಲಿ ಪಕ್ಷದ ಹಿತಾಸಕ್ತಿ ಅಡಗಿದೆ. ಅಮಾಯಕ ಮಕ್ಕಳ ಮನಸ್ಸಿನಲ್ಲಿ ಕೇಸರೀಕರಣ ತುಂಬಲು ಸರ್ಕಾರ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಲೇ ಬಂದಿದೆ. ಬಿಜೆಪಿ ಹಮ್ಮಿಕೊಂಡಿರುವ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ವಿಜಯ ಸಂಕಲ್ಪ ರ್ಯಾಲಿ ಹಮ್ಮಿಕೊಂಡಿದೆ. ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ಸರ್ಕಾರ ಆಯೋಜಿಸಿರುವ ವಿದ್ಯಾರ್ಥಿ ಅಭಿಯಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಅಭಿಯಾನ ಮುಂದುವರೆಯಲು ಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)
ಆರ್ಎಸ್ಎಸ್. ಎಬಿವಿಪಿ ಉಗ್ರರ ಸಂಘಟನೆ: ಡಿಕೆಶಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications