ಗೋಕರ್ಣ ವಿವಾದ: ಸರ್ಕಾರಕ್ಕೆ ನೋಟಿಸ್ ಜಾರಿ
ಧಾರವಾಡ, ಫೆ. 5 : ಗೋಕರ್ಣ ದೇವಾಲಯ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಲಯ ಆದೇಶವನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಧಾರವಾಡ ಸಂಚಾರಿ ಹೈಕೋರ್ಟ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ, ಸರ್ಕಾರ ನ್ಯಾಯಾಲಯದ ಆದೇಶ ಉಲ್ಲಂಘಿಸಿ ದೇವಾಲಯದ ಹುಂಡಿಯನ್ನು ಒಡೆದಿತ್ತು.
ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಗೋಕರ್ಣ ದೇವಾಲಯದ ಧರ್ಮದರ್ಶಿ ಬಾಲಚಂದ್ರ ದೀಕ್ಷಿತರು ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಧಾರವಾಡ ಸಂಚಾರಿ ಹೈಕೋರ್ಟ್ ಪೀಠ, ಉತ್ತರ ಕನ್ನಡ ಜಿಲ್ಲಾದಿಕಾರಿ ಕೆ ಗೋವಿಂದರಾಜು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಪ್ರಭಾಕರ್, ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಜಿ ನಾರಾಯಣಸ್ವಾಮಿ ಹಾಗೂ ಸಹಾಯಕ ಆಯುಕ್ತ ವಿ ಸಿ ಚಾವ್ಲಾ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications